Saturday, July 5, 2025
spot_imgspot_img
spot_imgspot_img

ಮರಕ್ಕೆ ನೇಣು ಬಿಗಿದು ಯುವಕ ಆತ್ಮಹತ್ಯೆ..!

- Advertisement -
- Advertisement -

ಸುಲ್ಕೇರಿ: ಯುವಕನೋರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಲ್ಕೇರಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸುಲ್ಕೇರಿ ಗ್ರಾಮದ ಮುಡಿಪಿರೆ ನಿವಾಸಿ ಕಿಶೋರ್ (25) ಎಂದು ಗುರುತಿಸಲಾಗಿದೆ.

ಕಿಶೋ‌ರ್ ಅವರು ಗಾರೆ ಕೆಲಸ, ಮದ್ದು ಸಿಂಪಡಿಸುವ ಕೆಲಸ ಮಾಡಿಕೊಂಡಿದ್ದರೆನ್ನಲಾಗಿದೆ. ಕಳೆದ ಒಂದು ವಾರದಿಂದ ಮಂಕಾಗಿದ್ದು,ಯಾರಲ್ಲಿಯೂ ಹೆಚ್ಚು ಬೆರೆಯುತ್ತಿರಲಿಲ್ಲ. ನಿನ್ನೆ ಮಧ್ಯಾಹ್ನದಿಂದ ಅವರು ನಾಪತ್ತೆಯಾಗಿದ್ದು, ಸಂಜೆಯವರೆಗೆ ಮನೆಗೆ ಬಾರದೆ ಇದ್ದಾಗ ಸ್ಥಳೀಯರು ಸೇರಿ ಹುಡುಕಲು ಪ್ರಾರಂಭಿಸಿದರು.

ರಾತ್ರಿ ಸುಮಾರು 11 ಗಂಟೆಗೆ ನೇಣು ಬಿಗಿದುಕೊಂಡ ರೀತಿಯಲ್ಲಿ ಕಿಶೋರ್ ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳಕ್ಕೆ ವೇಣೂರು ಪೋಲಿಸರು ಆಗಮಿಸಿ ಕೇಸು ದಾಖಲಿಸಿಕೊಂಡಿದ್ದಾರೆ. ಇವರು ಸಹೋದರ ಕೀರ್ತನ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

- Advertisement -

Related news

error: Content is protected !!