- Advertisement -
- Advertisement -
ಪುತ್ತೂರು : ಪುತ್ತೂರಿನ ಕಲ್ಲಿಮಾರು ಎಂಬಲ್ಲಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿನ್ನೆ ಬೆಳಿಗ್ಗೆ ಎಂದಿನಂತೆ ವಿದ್ಯಾರ್ಥಿನಿಯರಿಬ್ಬರು ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದಾಗ ದಾರಿಯಲ್ಲಿ ಬಂದ ಯುವಕನೊಬ್ಬ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಆತನಿಂದ ವಿದ್ಯಾರ್ಥಿನಿಯರು ತಪ್ಪಿಸಿಕೊಂಡು ಕಾಲೇಜಿಗೆ ಬಂದು ಕಾಲೇಜಿನ ಉಪನ್ಯಾಸಕಿಗೆ ಮಾಹಿತಿ ನೀಡಿದ್ದಾರೆ.
ಇನ್ನು ಈ ಯುವಕ ಕಡಬ ತಾಲೂಕಿನ ಬೆಳಂದೂರು ಮೂಲದ ಪ್ರವೀಣ್ ಯಾನೆ ಸೀತಾರಾಮ ಎನ್ನಲಾಗಿದೆ. ಈ ಬಗ್ಗೆ ಕಾಲೇಜಿನ ಉಪನ್ಯಾಸಕಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ
- Advertisement -