Sunday, April 28, 2024
spot_imgspot_img
spot_imgspot_img

ಉಳ್ಳಾಲ: ಗಾಂಜಾ ಸಿಗದೆ ಜಿಗುಪ್ಸೆ; ಯುವಕ ನೇಣಿಗೆ ಶರಣು

- Advertisement -G L Acharya panikkar
- Advertisement -
vtv vitla

ಉಳ್ಳಾಲ: ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ತಲಪಾಡಿಯ ನಾರ್ಲಾದಲ್ಲಿ ನಡೆದಿದೆ. ಮೃತ ಯುವಕನನ್ನು ತಲಪಾಡಿ ಗ್ರಾಮದ ನಾರ್ಲ ಪದವು ನಿವಾಸಿ ಪೈಝಲ್(24) ಎಂದು ಗುರುತಿಸಲಾಗಿದೆ.

ಫೈಝಲ್ ತನ್ನ ಮನೆಯ ಮೊದಲ ಅಂತಸ್ತಿನ ಕೊಠಡಿಯ ಫ್ಯಾನಿಗೆ ನೈಲಾನ್ ಬಟ್ಟೆಯಿಂದ ಕುಣಿಕೆ ಬಿಗಿದು ಆತ್ಮಹತ್ಯೆಗೈದಿದ್ದಾನೆ. ಮನೆಯಲ್ಲಿ ಫೈಸಲ್ ತಾಯಿ, ತಂಗಿ ಮತ್ತು ಅಜ್ಜಿ ಇದ್ದು ತಾಯಿ ಮನೆಯ ಮೇಲಿನ ಅಂತಸ್ತಿಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಫೈಝಲ್ ನಿತ್ಯವೂ ಬೆಳಗ್ಗೆ 9ರಿಂದ 10 ಗಂಟೆ ಅವಧಿಯಲ್ಲಿ ಗಾಂಜಾ ಸೇದುವ ಚಟ ಬೆಳೆಸಿದ್ದು, ಇಂದು ಗಾಂಜಾ ಸಿಗದ ಕಾರಣದಿಂದ ಜಿಗುಪ್ಸೆಗೊಂಡು ಆತ್ಮಹತ್ಯೆಗೈದಿರುವುದಾಗಿ ತಿಳಿದುಬಂದಿದೆ.

ಬೈಕ್ ಕಳವು ಪ್ರಕರಣದಲ್ಲಿ ಫೈಝಲ್ ನನ್ನ ಪೊಲೀಸರು ಬಂಧಿಸಿದ್ದು ಮೃತ ಫೈಝಲ್ ಪ್ರಕರಣವನ್ನ ಎದುರಿಸುತ್ತಿದ್ದ. ಉಳ್ಳಾಲ ಠಾಣೆಯಲ್ಲಿ ಈತನ ವಿರುದ್ಧ ಗಾಂಜಾ ಸೇವನೆಯ ಕೇಸು ದಾಖಲಾಗಿದೆ.

- Advertisement -

Related news

error: Content is protected !!