Thursday, May 16, 2024
spot_imgspot_img
spot_imgspot_img

ವಿಟ್ಲ: ಪೆರುವಾಯಿ ಕೋಳಿ ಅಂಕಕ್ಕೆ ದಾಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

- Advertisement -G L Acharya panikkar
- Advertisement -

ಯುವಕನ ಮೇಲೆ ಕಿಡಿಗೇಡಿಗಳಿಂದ ಹಿಗ್ಗಾಮುಗ್ಗಾ ಥಳಿತ; ಯುವಕ ಗಂಭೀರ

ವಿಟ್ಲ: ಯುವಕನೊಬ್ಬನಿಗೆ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ವಿಟ್ಲದ ಕಾವೇರಿ ಬಾರ್‌ನಲ್ಲಿ ನಿನ್ನೆ ರಾತ್ರಿ ನಡೆದಿದೆ.

ಪೆರುವಾಯಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ವರುಣ್ ರೈ ಅಂತರಗುತ್ತು ನೇತೃತ್ವದಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ್ದು, ಈ ವಿಚಾರವಾಗಿ ನಿನ್ನೆ ರಾತ್ರಿ ಬಾರ್‌ನಲ್ಲಿ ಯುವಕರ ನಡುವೆ ಮಾತಿನ ಚಕಾಮಕಿ ಬೆಳೆದಿದೆ. ಈ ವೇಳೆ ಕೇಪು ನಿವಾಸಿ ಸುರೇಶ್ ಎಂಬಾತನ ಮೇಲೆ ಸುಮಾರು ಆರು ಜನರ ತಂಡ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಹಲ್ಲೆಗೊಳಗಾದ ಸುರೇಶ್ ಗಂಭೀರ ಗಾಯಗೊಂಡಿದ್ದು ಕೂಡಲೇ ವಿಟ್ಲ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ತಲೆಗೆ ಗಂಭೀರ ಗಾಯಗೊಂಡ ಕಾರಣ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!