Monday, April 29, 2024
spot_imgspot_img
spot_imgspot_img

ಮಂಜೇಶ್ವರ : ವಿದ್ಯುತ್‌ ಶಾಕ್‌ ತಗುಲಿ ಯುವಕ ಮೃತ್ಯು

- Advertisement -G L Acharya panikkar
- Advertisement -

ಮಂಜೇಶ್ವರ: ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಹೊಸಂಗಡಿ ಬಳಿಯ ಅಂಗಡಿಪದವು ಎಂಬಲ್ಲಿ ನಡೆದಿದೆ.

ಹೊಸಂಗಡಿ ಬಳಿಯ ಅಂಗಡಿಪದವು ನಿವಾಸಿ ದಿ. ಅಶೋಕ್ – ಕಲಾವತಿ ದಂಪತಿಯ ಪುತ್ರ ಪ್ರಜ್ವಲ್ (19) ಎಂಬಾತ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಯುವಕ.

ಅಂಗಡಿಪದವಿನ ಅಂಗಡಿಯೊಂದರ ಮುಂಭಾಗದ ಕಬ್ಬಿಣದ ಗೇಟ್ ನಲ್ಲಿ ವಿದ್ಯುತ್‌ ಹರಿಯುತ್ತಿದ್ದು, ತಿಳಿಯದೆ ಸ್ಪರ್ಶಿಸಿದಾಗ ವಿದ್ಯುತ್ ಶಾಕ್ ತಗುಲಿದೆ.
ಬೊಬ್ಬೆ ಕೇಳಿದ ಸ್ಥಳೀಯರು ವಿದ್ಯುತ್ ಕಂಬದಿಂದ ವಿದ್ಯುತ್ ವಯರ್ ನ್ನು ಕಡಿತಗೊಳಿಸಿದ್ದಾರೆ. ಕೂಡಲೇ, ಉಪ್ಪಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲೆಂದು ಕೊಂಡೊಯ್ಯುವಾಗ ದಾರಿ ಮಧ್ಯೆ ಪ್ರಜ್ವಲ್ ಮೃತಪಟ್ಟಿದ್ದಾರೆ. ಮೃತಪಟ್ಟ ಪ್ರಜ್ವಲ್ ತಾಯಿ, ಇಬ್ಬರು ಸಹೋದರರ ಸಹಿತ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!