- Advertisement -
- Advertisement -
ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಮನಬಂದಂತೆ ವ್ಹೀಲಿಂಗ್ ಮಾಡ್ತಿದ್ದ ಯುವಕರ ಪುಂಡಾಟಕ್ಕೆ ಕಾರು ಡ್ರೈವರ್ ಒಬ್ಬರು ರೊಚ್ಚಿಗೆದ್ದು ಕಾನೂನು ಕೈಗೆತ್ತಿಕೊಂಡ ಘಟನೆ ನಡೆದಿದೆ.
ವ್ಹೀಲಿಂಗ್ ಮಾಡುತ್ತ ಕಾರಿಗೆ ಚಮಕ್ ಕೊಡ್ತಿದ್ದ ಯುವಕರನ್ನ ಅಡ್ಡಗಡ್ಡಿ ಬೈಕ್ಗೆ ಬೆಂಕಿ ಹಚ್ಚಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಹೊರವಲಯದ ಆವತಿ ಗ್ರಾಮದ ಬಳಿ ಈ ಘಟನೆ ನಡೆದಿದೆ.
ವ್ಹೀಲಿಂಗ್ ಮಾಡ್ತಿದ್ದ ಯುವಕರನ್ನ ಕಾರು ಚಾಲಕ ಅಡ್ಡ ಹಾಕ್ತಿದ್ದಂತೆ ಬೈಕ್ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಬಳಿಕ ಬೈಕ್ಗೆ ಬೆಂಕಿ ಹಚ್ಚಿ ಕಾರು ಚಾಲಕ ಎಸ್ಕೇಪ್ ಆಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -