Monday, May 6, 2024
spot_imgspot_img
spot_imgspot_img

ವಿಟ್ಲ: ಯುವಕೇಸರಿ ಅಬೀರಿ-ಅತಿಕಾರಬೈಲು (ರಿ) ಚಂದಳಿಕೆ ಸಂಘಟನೆಯ ನೂತನ ಅಧ್ಯಕ್ಷರಾಗಿ ಯೋಗೀಶ್ ಕೇಪುಳಗುಡ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ವನಿತ್ ಮಡಿವಾಳ ಅಬೀರಿ ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ವನಿತ್ ಜೋಗಿ ಡೆಪ್ಪಿನಿ ಆಯ್ಕೆ

- Advertisement -G L Acharya panikkar
- Advertisement -

ವಿಟ್ಲ: ಯುವಕೇಸರಿ ಅಬೀರಿ-ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವಾರ್ಷಿಕ ಮಹಾಸಭೆಯು ಇಂದು ಚಂದಳಿಕೆ ಯುವಕೇಸರಿ ಕಾರ್ಯಾಲಯದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಕುಂಡಡ್ಕ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ ಮರುವಾಳ , ದಿಗ್ವಿಜಯ ಗ್ರೂಪ್ ಇದರ ಚಯಾರ್ ಮೆನ್ ಆದ ದಿನಕರ ಭಟ್ ಮಾವೆ ಭಾಗವಹಿಸಿ ನೂತನ ಕಾರ್ಯಕಾರಿಣಿಯನ್ನು ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ಯೋಗೀಶ್ ಕೇಪುಳಗುಡ್ಡೆ , ಗೌರವಾಧ್ಯಕ್ಷರಾಗಿ ದಯಾನಂದ ಶೆಟ್ಟಿ ಉಜಿರೆಮಾರು, ಕಾರ್ಯಾಧ್ಯಕ್ಷರಾಗಿ ಗಣೇಶ್ ಪೂಜಾರಿ ಪಟ್ಲ , ಉಪಾಧ್ಯಕ್ಷರಾಗಿ ದುರ್ಗಾಪ್ರಸಾದ್ ಅತಿಕಾರಬೈಲು, ಅಶ್ವಥ್ ಪರನೀರು , ರಾಜೇಶ್ ಅಬೀರಿ , ಪ್ರಧಾನ ಕಾರ್ಯದರ್ಶಿಯಾಗಿ ವನಿತ್ ಅಬೀರಿ, ಸಂಘಟನಾ ಕಾರ್ಯದರ್ಶಿಯಾಗಿ ವನಿತ್ ಜೋಗಿ ಡೆಪ್ಪಿನಿ , ಜತೆ ಕಾರ್ಯದರ್ಶಿಯಾಗಿ ಪ್ರವೀಣ್ ಕಟ್ಟತ್ತಿಲ ಮತ್ತು ಬಾಲಕೃಷ್ಣ ಪೂಜಾರಿ ಪಟ್ಲ , ಕೋಶಾಧಿಕಾರಿಯಾಗಿ ಮಧುಕರ ಅಬೀರಿ, ಜೊತೆ ಕೋಶಾಧಿಕಾರಿಯಾಗಿ ತ್ಯಾಗರಾಜ್(ತಿರುಮಲೇಶ) ಕುರುಂಬಳ ಮತ್ತು ಹರೀಶ್ ಕೊಪ್ಪಳ , ಮಹೇಶ್ C.M ಚಂದಳಿಕೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗಣೇಶ ಅಬೀರಿ, ಪ್ರಧಾನ ಸಂಚಾಲಕರಾಗಿ ದಿವಾಕರ ಶೆಟ್ಟಿ ಅಬೀರಿ ಮತ್ತು ಸುಶಾಂತ್ ಸಾಲಿಯಾನ್ ಚಂದಳಿಕೆ, ದತ್ತಿನಿಧಿ ಪ್ರಮುಖರಾಗಿ ಶಶಿಧರ ಕೇಪುಳಗುಡ್ಡೆ, ಕಾರ್ಯಾಲಯ ಕಾರ್ಯದರ್ಶಿಯಾಗಿ ಅರುಣ್ ಚಂದಳಿಕೆ, ಪುಷ್ಪಾರಾಜ್ ಡೆಪ್ಪಿನಿ, ಕ್ರೀಡಾಕಾರ್ಯದರ್ಶಿಯಾಗಿ ಮಹೇಶ್ ಪಡೀಲ್, ಸುರೇಶ ಗೌಡ ಓಟೆ , ಸಾಮಾಜಿಕ ಜಾಲತಾಣ ಪ್ರಮುಖರಾಗಿ ಪುನೀತ್ ಕುರುಂಬಳ, ಕಾನೂನು ಸಲಹೆಗಾರರಾಗಿ ಗೋವಿಂದ ರಾಜ್ ಪೆರುವಾಜೆ, ಗೌರವ ಸಲಹೆಗಾರರಾಗಿ ಅಶೋಕ್ ಕುಮಾರ್ ರೈ ಕೊಡಿಂಬಾಡಿ, ದೇಜಪ್ಪ ಪೂಜಾರಿ ನಿಡ್ಯ, ಸಂಜೀವ ಪೂಜಾರಿ ವಿಟ್ಲ, ಈಶ್ವರ ಬಂಗೇರ ಅಬೀರಿ, ವಿಠಲ ಪೂಜಾರಿ ಅತಿಕಾರಬೈಲು, ಲೋಕನಾಥ್ ಕುರುಂಬಳ, ಚಂದ್ರಹಾಸ ಅಬೀರಿ, ಗಂಗಾಧರ ಪೂಜಾರಿ ಪರನೀರು ಮತ್ತು ಪದ್ಮನಾಭ ಶೆಟ್ಟಿ ಚಪುಡಿಯಡ್ಕ ಇವರುಗಳು ಆಯ್ಕೆಯಾದರು.

ಕಳೆದ 5 ವರ್ಷದಲ್ಲಿ ಒಟ್ಟು 6,91,600ರೂ. ಗಳನ್ನು ಮತ್ತು ಈ ವರ್ಷದಲ್ಲಿ 1,20,000 ರೂಗಳನ್ನು ಒಟ್ಟು 8,11,600 ಮತ್ತು ಸಾವಿರಾರು ಕೆ. ಜಿ ಅಕ್ಕಿಯನ್ನು ದತ್ತಿನಿಧಿ ಯೋಜನೆಯಡಿಯಲ್ಲಿ ವಿತರಿಸಲಾಗಿದೆ ಎಂದು ತಿಳಿಸಲಾಯಿತು. ಅಲ್ಲದೆ ತುರ್ತು ಸಂದರ್ಭದಲ್ಲಿ ಹಲವಾರು ಜನರಿಗೆ ರಕ್ತದಾನ ಮಾಡಲಾಗಿದೆ ಎಂದು ತಿಳಿಸಲಾಯಿತು. 2022-23 ವಾರ್ಷಿಕ ಅವಧಿಯಲ್ಲಿ 5,14,390 ರೂಗಳ ವ್ಯವಹಾರವನ್ನು ನಡೆಸಲಾಗಿದೆ ಎಂದು ತಿಳಿಸಲಾಯಿತು.

ಯುವಕೇಸರಿಯ ಸುಶಾಂತ್ ಸಾಲಿಯಾನ್ ಚಂದಳಿಕೆ ಸ್ವಾಗತಿಸಿ, ದಿವಾಕರ ಶೆಟ್ಟಿ ಅಬೀರಿ ವಂದಿಸಿದರು, ವಿಠಲ ಪೂಜಾರಿ ಅತಿಕಾರಬೈಲು ನಿರೂಪಿಸಿದರು ಮತ್ತು ಗಣೇಶ್ ಅಬೀರಿ ಸಹಕರಿಸಿದರು.

- Advertisement -

Related news

error: Content is protected !!