Saturday, June 28, 2025
spot_imgspot_img
spot_imgspot_img

ವಿಟ್ಲ: ಯುವಕೇಸರಿ ಅಬೀರಿ-ಅತಿಕಾರ ಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ ವನಮಹೋತ್ಸವ ಹಾಗೂ ಸಸಿ ವಿತರಣಾ ಕಾರ್ಯಕ್ರಮ ಮತ್ತು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರಿಗೆ ಅಭಿನಂದನಾ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ಯುವಕೇಸರಿ ಅಬೀರಿ-ಅತಿಕಾರ ಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ ಚಂದಳಿಕೆ ಸಮೀಪದ M.A ಕಾಂಪ್ಲೆಕ್ಸ್ ಸಭಾಂಗಣದಲ್ಲಿ ವನಮಹೋತ್ಸವ ಹಾಗೂ ಸಸಿ ವಿತರಣಾ ಕಾರ್ಯಕ್ರಮ ಮತ್ತು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಯುವಕೇಸರಿ ಸಂಘದ ಅಧ್ಯಕ್ಷ ಗಣೇಶ್ ಪೂಜಾರಿ ಪಟ್ಲ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಿಟ್ಲ ರೋಟರಿ ಕ್ಲಬ್ ಇದರ ಅಧ್ಯಕ್ಷ ಕಿರಣ್ ಕುಮಾರ್ ಮತ್ತು ಉದ್ಯಮಿಗಳಾದ M.N ದಿನಕರ ಭಟ್ ಮಾವೆ ಮತ್ತು ದೇಜಪ್ಪ ಪೂಜಾರಿ ನಿಡ್ಯ, ಯುವಕೇಸರಿ ಗೌರವ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಮತ್ತು ಪಟ್ಟಣ ಪಂಚಾಯತ್ ಸದಸ್ಯ ರಕ್ಷಿತಾ ಸನತ್ ಸಾಲಿಯಾನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಯುವಕೇಸರಿ ಸಂಘಟನೆಯಲ್ಲಿ 5 ವರ್ಷಗಳ ಕಾಲ ಗೌರವ ಸಲಹೆಗಾರರಾಗಿ ಸೇವೆ ಸಲ್ಲಿಸಿ ಇದೀಗ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಅಶೋಕ್ ಕುಮಾರ್ ರೈ ಇವರನ್ನು ಗೌರವಿಸಲಾಯಿತು ಅಲ್ಲದೇ ವನಮಹೋತ್ಸವದ ಅಂಗವಾಗಿ ವಿವಿಧ ಜಾತಿಯ 250 ಗಿಡಗಳನ್ನು ಉಚಿತವಾಗಿ ಸಾರ್ವಜನಿಕರಿಗೆ ವಿತರಿಸಲಾಯಿತು.ಇದೇ ವೇಳೆ ವಿಟ್ಲದ ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಆರಂಭಿಸುವಂತೆ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಂದಳಿಕೆ ಇಲ್ಲಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಮಾಡಬೇಕೆಂದು ಯುವಕೇಸರಿ ತಂಡದ ಪರವಾಗಿ ಮಾನ್ಯ ಶಾಸಕರಲ್ಲಿ ವಿನಂತಿ ಮಾಡಲಾಯಿತು.

ಸುಶಾಂತ್ ಸಾಲಿಯಾನ್ ಸ್ವಾಗತಿಸಿ, ದಿವಾಕರ ಶೆಟ್ಟಿ ಅಬೀರಿ ವಂದಿಸಿ, ವಿಠಲ ಪೂಜಾರಿ ಅತಿಕಾರಬೈಲು ನಿರೂಪಿಸಿದರು.

- Advertisement -

Related news

error: Content is protected !!