Sunday, June 29, 2025
spot_imgspot_img
spot_imgspot_img

ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ ಸಾವು; ಡೆತ್‌ನೋಟ್‌ನಲ್ಲಿ ಬಿಜೆಪಿ ಕಾರ್ಯಕರ್ತನ ಹೆಸರು..!!

- Advertisement -
- Advertisement -

ಚಿಕ್ಕಮಗಳೂರು: ಬಿಜೆಪಿ ಕಾರ್ಯಕರ್ತನ ಕಿರುಕುಳಕ್ಕೆ 17 ವರ್ಷದ ಬಾಲಕಿಯೋರ್ವಳು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ.

ಸಾವಿಗೂ ಮೊದಲು ಬಾಲಕಿ ಆಸ್ಪತ್ರೆಯಲ್ಲಿ ಡೆತ್ ನೋಟ್ ಬರೆದಿದ್ದು, ಬಿಜೆಪಿ ಕಾರ್ಯಕರ್ತ ಹಿತೇಶ್(25) ಎಂಬಾತ ತನ್ನ ಸಾವಿಗೆ ಕಾರಣ ಎಂದು ತಿಳಿಸಿದ್ದಾಳೆನ್ನಲಾಗಿದೆ. ಆದರೂ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸದೇ ನಿರ್ಲಕ್ಷ್ಯವಹಿಸಿದ್ದಾರೆ.

ಹಿತೇಶ್ ಎಂಬಾತ ಅಪ್ರಾಪ್ತ 17 ವರ್ಷದ ದೀಪ್ತಿಯನ್ನು ಪ್ರೀತಿಸುವ ನಾಟಕವಾಗಿ, ವಂಚಿಸಿದ್ದ. ಅಲ್ಲದೇ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಮೃತ ವಿದ್ಯಾರ್ಥಿನಿ ಕಳಸದ ಪದವಿ ಪೂರ್ವ ಕಾಲೇಜಿನಲ್ಲಿ ಓದುತ್ತಿದ್ದಳು. ದೀಪ್ತಿ ಜನವರಿ 10ರಂದು ಕಳೆ ನಾಶ ಸೇವಿಸಿದ್ದಳು. ನಂತರ ಆಕೆಯನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಜನವರಿ 14ರಂದು ಮೃತಪಟ್ಟಿದ್ದಾಳೆ. ಸಾಯುವ ಕೊನೆಯ ಕ್ಷಣದಲ್ಲಿ ಡೆತ್ ನೋಟ್ ಬರೆದಿಟ್ಟಿದ್ದಳು.

ಡೆತ್‌ನೋಟ್‌ನಲ್ಲಿ ಹೆಸರಿಸಿದಂತೆ, ಬಿಜೆಪಿ ಕಾರ್ಯಕರ್ತ ಎನ್ನಲಾದ ಹಿತೇಶ್ ವಿರುದ್ಧ ದೂರು ದಾಖಲಿಸಲು ಕುದುರೆಮುಖ ಪೊಲೀಸರು ಸತಾಯಿಸುತ್ತಿದ್ದರು. ಬಾಲಕಿಯ ಪೋಷಕರು ನೀಡಿದ ದೂರನ್ನು ಸ್ವೀಕರಿಸದ ಕುದುರೆಮುಖ ಪೊಲೀಸರನ್ನು ಚಿಕ್ಕಮಗಳೂರು ಎಸ್‌ಪಿ ತರಾಟೆಗೆ ತೆಗೆದುಕೊಂಡಿದ್ದಾರೆ. ಎಸ್ ಪಿ ಸೂಚನೆ ಬಳಿಕ ಹಿತೇಶ್ ವಿರುದ್ಧ ಪೊಲೀಸರು ದೂರು ಸ್ವೀಕರಿಸಿದ್ದಾರೆ.

ಹಿತೇಶ್ ವಿರುದ್ದ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಲು ಪೋಷಕರ ಒತ್ತಾಯಿಸಿದ್ದಾರೆ. ಆದರೆ, ಈವರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿಲ್ಲ. ಪೊಲೀಸರ ನಿರ್ಲಕ್ಷ್ಯಕ್ಕೆ ದೀಪ್ತಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿ ಬಿಜೆಪಿ ಕಾರ್ಯಕರ್ತ ಹಿತೇಶ್ ವಿರುದ್ಧ ಕ್ರಮಕ್ಕೆ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!