- Advertisement -
- Advertisement -


ಬೆಂಗಳೂರು: ಆಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ಬೆಂಗಳೂರಿನ ಐವರು ಪೊಲೀಸರು ರಕ್ತದಾನ ಮಾಡಿದ್ದಾರೆ. ಏಪ್ರಿಲ್ 28ರಂದು ಕಾಮಾಕ್ಷಿಪಾಳ್ಯದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿ ಮೇಲೆ ನಾಗೇಶ್ ಅಲಿಯಾಸ್ ನಾಗ ಎಂಬಾತ ದಾಳಿ ನಡೆಸಿದ್ದನು.
ಆಸಿಡ್ ದಾಳಿಗೆ ಒಳಗಾಗಿದ್ದಂತೆ ಸಂತ್ರಸ್ತೆಗೆ ಮೂರು ಸರ್ಜರಿ ನಡೆದಿದ್ದು, ಈ ವೇಳೆ ರಕ್ತದಾನ ಮಾಡಿದ್ದಾರೆ. ಪೊಲೀಸ್ ಇನ್ಸ್ ಪೆಕ್ಟರ್ ಎಂ.ಪ್ರಶಾಂತ್, ಪ್ರೊಬೇಷನರಿ ಸಬ್ ಇನ್ಸ್ ಪೆಕ್ಟರ್ ವಿಶ್ವನಾಥ್ ರೆಡ್ಡಿ, ಚಂದ್ರಯ್ಯ, ಮೋಹನ್ ಕುಮಾರ್ ಮತ್ತು ನಟರಾಜ್ ಅವರು ರಕ್ತದಾನ ಮಾಡಿದ್ದಾರೆ. ಒಟ್ಟು ಐದು ಯುನಿಟ್ ರಕ್ತದಾನ ಮಾಡಲಾಗಿದೆ ಎಂದು ಡಿಸಿಪಿ ಸಂಜೀವ್ ಪಾಟೀಲ್ ಹೇಳಿದ್ದಾರೆ.
ಇನ್ನೂ ಪೊಲೀಸರು ರಕ್ತದಾನ ಮಾಡಿರೋದಕ್ಕೆ ಸೇಂಟ್ ಜಾನ್ಸ್ ಆಸ್ಪತ್ರೆ ವೈದ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯುವತಿಗೆ ಇದುವರೆಗೂ ಮೂರು ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಶೀಘ್ರದಲ್ಲಿಯೇ ಮತ್ತೊಂದು ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂದು ವೈದ್ಯರು ಹೇಳಿದ್ದಾರೆ.
- ನೆಲ್ಯಾಡಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು
- ಪ್ರಧಾನಿ ನರೇಂದ್ರ ಮೋದಿಗೆ ‘ಧರ್ಮ ಚಕ್ರವರ್ತಿ’ ಬಿರುದು ಪ್ರದಾನ
- ವಿಜಯಪುರ – ಮಂಗಳೂರು ರೈಲು ಸಂಚಾರ ಖಾಯಂ -ಸಂಸದ ಕ್ಯಾಪ್ಟನ್ ಬ್ರಿಜೇಶ್ ಘೋಷಣೆ
- ದ್ವೇಷ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ: ಸಿ ಎಂ
- ಅಳಿಕೆ ನಿವಾಸಿ ದೇವಿಪ್ರಸಾದ್ ಆರ್.ಎನ್. ಅವರಿಗೆ ಡಾಕ್ಟರೇಟ್ ಪದವಿ


- Advertisement -