- Advertisement -
- Advertisement -
ಉಡುಪಿ: ಕಳೆದ 25 ವರ್ಷಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಬಾರ್ಕೂರಿನ ನಿವಾಸಿ ಬಾಬು ಮರಕಾಲ ಮೃತಪಟ್ಟಿರುವ ವ್ಯಕ್ತಿ. ಬಾಬು ಮರಕಾಲ ಕಳೆದ ತಿಂಗಳೂ ಉಡುಪಿ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅಸ್ವಸ್ಥಗೊಂಡು ಬಿದ್ದಿದ್ರು. ಆಗ ಇವರನ್ನು ಸಮಾಜಸೇವಕರಾದ ನಿತ್ಯಾನಂದ ಆಸ್ಪತ್ರೆಗೆ ದಾಖಲಿಸಿದರು. ನಂತರ ಚಿಕಿತ್ಸೆ ಫಲಿಸಿದ ವೃದ್ಧ ಸಾವನ್ನಪ್ಪಿದು, ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿ ರಕ್ಷಿಸಿಡಲಾಗಿತ್ತು.
ಇದೀಗ ಸಂಬಂಧಿಕರಿಗೆ ಬಾಬು ಮರಕಾಲ ಮೃತಪಟ್ಟಿರುವ ವಿಷಯ ತಿಳಿದುಬಂದಿದೆ. ಆ ಬಳಿಕ ಸಂಬಂಧಿಕರು ಆಸ್ಪತ್ರೆಯನ್ನು ಸಂಪರ್ಕಿಸಿ ಕಾನೂನು ಪ್ರಕ್ರಿಯೆ ಮೂಲಕ ಶವವನ್ನು ಪಡೆದುಕೊಂಡರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಾಯದಿಂದ ಅಂತ್ಯಸಂಸ್ಕಾರವನ್ನೂ ನಡೆಸಿದ್ದಾರೆ. ಇವರು ಕಳೆದ 25 ವರ್ಷಗಳಿಂದ ಯಾವುದೋ ಕಾರಣಕ್ಕೆ ನಾಪತ್ತೆಯಾಗಿದ್ದಾಗಿ ತಿಳಿದುಬಂದಿದೆ.
- ಹಲವು ಸಮಸ್ಯೆಗಳಿಗೆ ರಾಮಬಾಣ ಶಂಖಪುಷ್ಪ
- ಹಾಸನ ಅಶ್ಲೀಲ ವಿಡಿಯೋ ಕೇಸ್; ಅಜ್ಜಿಯನ್ನು ಬಿಡದ ರಾಕ್ಷಸ
- ಹಾಸನದಲ್ಲಿ ಪೆನ್ ಡ್ರೈವ್ ಅಶ್ಲೀಲ ವೀಡಿಯೋ ಪ್ರಕರಣ : ಮನೆ ಕೆಲಸದಾಕೆಯಿಂದಲೇ ದೂರು; ಯಾರ್ ಮೇಲೆ ಬಿತ್ತು FIR?
- ವಿದ್ಯುತ್ ಕಂಬಕ್ಕೆ ಬೆಂಕಿ ತಗುಲಿ ಸ್ಫೋಟ : ನಾಲ್ವರಿಗೆ ಗಾಯ
- ಡ್ರಗ್ಸ್ ಸಾಗಾಟದ ದೋಣಿಯನ್ನು ವಶಕ್ಕೆ ಪಡೆದ ಭಾರತ; 600 ಕೋಟಿ ರೂ ಮೌಲ್ಯದ ಡ್ರಗ್ಸ್ ವಶ : 14 ಪಾಕಿಸ್ತಾನೀಯರ ಬಂಧನ
- Advertisement -