- Advertisement -
- Advertisement -
ಉಡುಪಿ: 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಸಿದ್ದಾಪುರದಲ್ಲಿ ವರದಿಯಾಗಿದೆ. ಹಾಲಾಡಿ ಪ್ರೌಢಶಾಲೆಯ ಗಣೇಶ (14) ಮೃತ ವಿದ್ಯಾರ್ಥಿ.
ಹೆಂಗವಳ್ಳಿ ನಿಲ್ಸಕಲ್ ಇರಿಗೆ ಎಂಬಲ್ಲಿನ ಮನೆಯಲ್ಲಿ ಬಾಲಕ ಆ. 19 ರಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದುಬಂದಿಲ್ಲ. ಶಾಲೆಗೆ ಹೋಗಲು ಮನಸ್ಸಿಲ್ಲದೇ ಅಥವಾ ಇನ್ನಾವುದೇ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -