Saturday, June 28, 2025
spot_imgspot_img
spot_imgspot_img

ಉಡುಪಿ: ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ, ಓರ್ವ ಪರಾರಿ

- Advertisement -
- Advertisement -
vtv vitla

ಉಡುಪಿ: ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದ ಮೇಲೆ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದ ಲಾಡ್ಜ್‌ವೊಂದಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಆರೋಪಿಗಳನ್ನು ಬಂಧಿಸಿದ್ದು ಓರ್ವ ಆರೋಪಿ ಪರಾರಿಯಾಗಿದ್ದಾನೆ.

ಕಾಪು ಎರ್ಮಾಳ್ ನಿವಾಸಿ ಜಯಂತ್ ಸಾಲಿಯಾನ್ (46), ಹೆಬ್ರಿಯ ದಿನೇಶ್ ಎಸ್ (42) ಪ್ರಕರಣದ ಆರೋಪಿಗಳು. ಶೇಖರ್ ಎನ್ನುವಾತ ದಾಳಿ ಸಂದರ್ಭದಲ್ಲಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾಯಾಗಿದ್ದಾನೆ.

ಉಡುಪಿನ ಹಳೆ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿ ಇರುವ ಶಾಂಭವಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆಯನ್ನು ನಡೆಸುತ್ತಿರುವ ಬಗ್ಗೆ ಬಂದ ದೂರಿನ ಮೇರೆಗೆ ಇಂದು ಮಧ್ಯಾಹ್ನದ ವೇಳೆ ಉಡುಪಿ ಉಪಭಾಗದ ಪೊಲೀಸ್ ಉಪಾಧೀಕ್ಷಕರು ಇತರ ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿದ್ದರು.

ಈ ವೇಳೆ ಓರ್ವ ಸಂತ್ರಸ್ತ ಮಹಿಳೆಯನ್ನು ರಕ್ಷಿಸಿ ಆರೋಪಿಗಳಾದ ಜಯಂತ್ ಸಾಲಿಯಾನ್ ಮತ್ತು ದಿನೇಶ್ ಎಸ್. ಎಂಬ ಇಬ್ಬರನ್ನು ಬಂಧಿಸಿದ್ದಾರೆ. ಹಾಗೂ ಕೃತ್ಯಕ್ಕೆ ಸಂಬಂಧಿಸಿದ 4 ಮೊಬೈಲ್ ಫೋನ್, 5,600 ರೂ. ನಗದು, ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳಾದ ಶೇಖರ್, ಜಯಂತ್ ಮತ್ತು ದಿನೇಶ್ ಇವರು ಸೇರಿಕೊಂಡು ನೊಂದ ಮಹಿಳೆಯನ್ನು ಮಹಿಳೆಯನ್ನು ಲಾಡ್ಜ್ ರೂಮಿನಲ್ಲಿರಿಸಿ ಹಣಕ್ಕಾಗಿ ವೇಶ್ಯವಾಟಿಕೆ ನಡೆಸಿ ಈ ಹಣದಿಂದ ಜೀವನ ನಡೆಸುತ್ತಿರುವುದು ತನಿಖೆಯಲ್ಲಿ ತಿಳಿದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ‌.

ಇದೇ ಹೋಟೆಲ್‌ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು

ಶಾಂಭವಿ ಹೋಟೆಲ್‌ನಲ್ಲಿ ಈ ಹಿಂದೆ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಆದಾದ ಬಳಿಕ ಪ್ರೇಮ ವೈಫಲ್ಯದಿಂದ ನೊಂದ ಮಂಗಳೂರು ಕೊಣಾಜೆಯ, ಮೆಡಿಕಲ್ ರೆಪ್ ಶರಣ್ ರಾಜ್ (31) ಆತ್ಮಹತ್ಯೆಗೆ ಶರಣಾಗಿದ್ದ.

- Advertisement -

Related news

error: Content is protected !!