Saturday, June 28, 2025
spot_imgspot_img
spot_imgspot_img

ಉಪ್ಪಿನಂಗಡಿ: ಚಲಿಸುತ್ತಿದ್ದ ಬಸ್ಸಿನಡಿಗೆ ಬಿದ್ದು ತಾಯಿ ಮಗು ದಾರುಣ ಸಾವು; ಸಾರ್ವಜನಿಕರಿಂದ ಪ್ರತಿಭಟನೆ!

- Advertisement -
- Advertisement -
driving

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದಲ್ಲಿ ಚಲಿಸುತ್ತಿದ್ದ ಬಸ್ಸಿನಡಿಗೆ ಬಿದ್ದು ತಾಯಿ ಮಗು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ತಾಯಿ ಮಗು ರಸ್ತೆ ದಾಟುತ್ತಿದ್ದಾಗ ಧಿಡೀರನೆ ನುಗ್ಗಿದ ಕೆಎಸ್ ಆರ್ ಟಿಸಿ ಅವರ ಇಬ್ಬರ ಮೇಲೆ ಚಲಿಸಿದೆ. ಘಟನೆಯಿಂದ ತಾಯಿ ಮತ್ತು ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳದಲ್ಲಿ ಸೇರಿದ ಸಾರ್ವಜನಿಕರು ಬಸ್ಸಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್ ಗಳ ನಡುವಿನ ಪೈಪೋಟಿಯಿಂದ ಇಂತಹ ಘಟನೆ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಬಸ್ ನಿಲ್ದಾಣದೊಳಗೆ ಪ್ರವೇಶಿಸಬಾರದು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಬಂದ ಉಪ್ಪಿನಂಗಡಿ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!