- Advertisement -
- Advertisement -
ಉಪ್ಪಿನಂಗಡಿ: ಇಲ್ಲಿನ ಬೊಳ್ಳಾರು ಎಂಬಲ್ಲಿ ಕಳೆದ ಮೂರು ದಿನಗಳ ಹಿಂದೆ ನದಿಯಲ್ಲಿ ಸ್ನಾನ ಮಾಡಲೆಂದು ನೀರಿಗಿಳಿದ ಯುವಕ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಇದೀಗ ಯುವಕನ ಮೃತದೇಹ ಪತ್ತೆಯಾಗಿದೆ.
ನದಿಗೆ ಒಟ್ಟು ಐದು ಮಂದಿ ಸ್ನಾನಕ್ಕೆ ಇಳಿದಿದ್ದು ಐವರ ಪೈಕಿ ಛತ್ತಿಸ್ ಘಡ್ ನ ಸುಕ್ಮೊ ರಾಮ್ ಗಡ್ವೆ (21) ರವರು ಕಣ್ಮರೆಯಾಗಿದರು.ಈ ಯುವಕ ಸ್ವರ್ಣ ಭೂಮಿ ಬೋರ್ ವೆಲ್ ನಲ್ಲಿ ಕಾರ್ಮಿಕರಾಗಿದ್ದರು.
ಕಳೆದ ಮೂರು ದಿನಗಳ ಹಿಂದೆ ಬೊಳ್ಳಾರು ಎಂಬಲ್ಲಿ ನದಿ ನೀರಿನಲ್ಲಿ ಸ್ನಾನ ಮಾಡುವ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬಂದಿಗಳು ತೆರಳಿ ಕಾರ್ಯಾಚರಣೆ ನಡೆಸಿದ್ದರು. ಇದೀಗ ಪೆರ್ನೆ ಸಮೀಪ ಬಿಳಿಯೂರು ಎಂಬಲ್ಲಿನ ನದಿ ದಡದಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.
- Advertisement -