- Advertisement -
- Advertisement -
ಕಡಬ: ಸುಲಿದು ಮಾರಾಟ ಮಾಡಲು ಮನೆಯಲ್ಲಿ ಇಟ್ಟಿದ್ದ ಅಡಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕಡಬ ಪೋಲಿಸರು ಬಂಧಿಸಿದ್ದಾರೆ.
ಕಡಬ ತಾಲೂಕು ಹಳೆನೇರಂಕಿ ಗ್ರಾಮದ ಅಲೆಪ್ಪಾಡಿಯ ಸುರೇಶ್ ಎಂಬವರ ಮನೆಯಿಂದ ಪರಮೇಶ್ವರ್ ಎಂಬಾತ ಅಡಿಕೆ ಕದ್ದು ಪರಾರಿಯಾಗಿದ್ದನು.
ಆರೋಪಿಯನ್ನು ಮನೆಯಿಂದ ವಶಕ್ಕೆ ಪಡೆದುಕೊಂಡು ವಿಚಾರಿಸಿದ ಪೋಲಿಸರು ಆತನು ಕಳವು ಮಾಡಿದ ಅಡಿಕೆಯನ್ನು ಮತ್ತು ಕಳವು ಮಾಡಲು ಉಪಯೋಗಿಸಿದ ಮೋಟರ್ ಸೈಕಲ್ ಅನ್ನು ವಶಪಡಿಸಿಕೊಂಡಿದ್ದಾರೆ.
ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
- Advertisement -