Sunday, June 29, 2025
spot_imgspot_img
spot_imgspot_img

ಕರಾವಳಿಗೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್ ; ಉಡುಪಿ ರಜತೋತ್ಸವದಲ್ಲಿ ಭಾಗಿ

- Advertisement -
- Advertisement -

ಮಂಗಳೂರು: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ಆ.25ರ ಗುರುವಾರ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಬೆಂಗಳೂರಿನಿಂದ ವಿಮಾನ ಮೂಲಕ ಕೇಂದ್ರ ಸಚಿವರಾದ ಶೋಭಾ ಕರಂದಾಜ್ಲೆ ಅವರ ಜೊತೆ ಬಂದಿಳಿದ ರಾಜ್ಯಪಾಲರನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಸ್ವಾಗತಿಸಿದರು.

ಪೋಲಿಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ನಂತರ ರಾಜ್ಯಪಾಲರು ರಸ್ತೆ ಮಾರ್ಗವಾಗಿ ಉಡುಪಿಗೆ ತೆರಳಿದರು.

- Advertisement -

Related news

error: Content is protected !!