- Advertisement -
- Advertisement -
ಕುಮಟಾ: ಪಾದಚಾರಿ ಓರ್ವ ಹೆದ್ದಾರಿ ಪಕ್ಕ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರುವೊಂದು ಡಿಕ್ಕಿಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಟ್ಕುಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಟ್ಕುಳಿ ನಿವಾಸಿ ವಿಠ್ಠಲ ಪಟಗಾರ ಸಾವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಹೆದ್ದಾರಿ ಸಮೀಪ ನಡೆದುಕೊಂಡು ಹೋಗುತ್ತಿದ್ದ ವೇಳೆ ಕುಮಟಾ ಕಡೆಯಿಂದ ಅಂಕೋಲಾ ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ವಿಠ್ಠಲ್ ಪಟಗಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆದರೆ ಚಾಲಕ ಕಾರನ್ನು ನಿಲ್ಲಿಸದೆ ಪರಾರಿಯಾಗಿದ್ದು, ಬಳಿಕ ಹಿರೇಗುತ್ತಿ ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆದುಕೊಳ್ಳಲಾಗಿದೆ.
- Advertisement -