Sunday, June 29, 2025
spot_imgspot_img
spot_imgspot_img

ಕಾರ್ಕಳ: ಅಣ್ಣನ ದಾರಿ ಅನುಕರಿಸಿದ ಸಹೋದರಿ..!? ಮೆಸ್ಕಾಂ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಉಡುಪಿ: ಮನನೊಂದ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕೇಪುಲ ಎಂಬಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕಲ್ಯಾ ಗ್ರಾಮದ ನಿಶಾ (೨೩) ಎನ್ನಲಾಗಿದೆ.

ಮನೆ ಸಮೀಪದ ಗುಡ್ಡದಲ್ಲಿ ನಿಶಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಶಾ ಅವರು ಮೆಸ್ಕಾಂ ಉದ್ಯೋಗಿಯಾಗಿದ್ದರು. ನಿಶಾ ಅವರ ಸಹೋದರ ಆರು ತಿಂಗಳ ಹಿಂದೆ ಮುಲ್ಕಿ ಠಾಣೆ ವ್ಯಾಪ್ತಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಇದೇ ನೋವಿನಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತರ ತಂದೆ ರವಿ ಪೂಜಾರಿ ಅವರು ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!