- Advertisement -
- Advertisement -

ಉತ್ತರ ಕನ್ನಡ: ಜಿಲ್ಲೆಯ ಕುಮಟಾದ ವಿದ್ಯಾಧಿರಾಜ ಕಾಲೇಜು ಆವರಣದಲ್ಲಿ ಬಾಂಬ್ ಮಾದರಿ ವಸ್ತು ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ವಾಯುವಿಹಾರಕ್ಕೆ ತೆರಳಿದ್ದವರು ಬಾಂಬ್ ಮಾದರಿ ವಸ್ತು ಗಮನಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಕುಮಟಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಕಾಲೇಜು ಆವರಣದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಶ್ವಾನದಳ ಬೀಡುಬಿಟ್ಟಿವೆ. ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ತಂಡ ಆಗಮನ ಸಾಧ್ಯತೆ ಇದೆ. ಕುಮಟಾ ವ್ಯಾಪ್ತಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.



- Advertisement -








