Saturday, June 28, 2025
spot_imgspot_img
spot_imgspot_img

ಕಾಸರಗೋಡಿನ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟ ಕಿಡಿಗೇಡಿಗಳು

- Advertisement -
- Advertisement -

ಮಂಗಳೂರು: ಮಂಗಳೂರು ಗಡಿ ಭಾಗದಲ್ಲಿ ಕಿಡಿಗೇಡಿಗಳು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದು, ಕಾಸರಗೋಡಿನ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟು ರೈಲ್ವೆ ಹಳಿಗಳನ್ನು ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ಕಾಸರಗೋಡಿನ ಕೋಟಿಕುಳಂ-ಬೇಕಳ ಮಧ್ಯೆ ರೈಲ್ವೆ ಹಳಿಗಳ ಮೇಲೆ ಕಿಡಿಗೇಡಿಗಳು ಕಬ್ಬಿಣದ ಸರಳುಗಳು, ಕಾಂಕ್ರೀಟ್ ಇಟ್ಟು ರೈಲು ಹಳಿಗಳನ್ನು ತುಂಡು ಮಾಡಲು ಯತ್ನಿಸಿರುವ ಘಟನೆ ನಡೆದಿದೆ. ರೈಲ್ವೆ ಗಾರ್ಡ್ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ಹಳಿ ಮೇಲೆ 35 ಕೆಜಿ ಕಾಂಕ್ರೀಟ್ ತುಂಡು ಪತ್ತೆಯಾಗಿದೆ. ರೈಲ್ವೆ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

ಇನ್ನು ಕಳೆದ ಶನಿವಾರ ಚಿತ್ತಾರಿ ಎಂಬಲ್ಲಿ ಕೊಯಂಬತ್ತೂರು ಮಂಗಳೂರು ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲೆಸೆದು ಪರಾರಿಯಾಗಿದ್ದರು.

- Advertisement -

Related news

error: Content is protected !!