


ಕಾಸರಗೋಡು: RSS ಸಕ್ರಿಯ ಕಾರ್ಯಕರ್ತರೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫೆ. 15ರ ಮುಂಜಾನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಅಣಂಕೂರು ಜೆಪಿ ಕಾಲೋನಿಯ ಜ್ಯೋತಿಶ್ (35) ಎನ್ನಲಾಗಿದೆ.

ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದ ಜ್ಯೋತಿಷ್ ಇಂದು ಬೆಳಗ್ಗೆ ಮನೆಯವರು ಗಮನಿಸಿದಾಗ ನಾಪತ್ತೆಯಾಗಿದ್ದು, ಹುಡುಕಾಡಿದಾಗ ಮನೆ ಸಮೀಪದ ಮರವೊಂದರ ರೆಂಬೆಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಕ್ಷಣವೇ ಅವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕರೆದೊಯ್ದಿದ್ದೂ ಆದರೆ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಪೊಲೀಸರ ತನಿಖೆ ಬಳಿಕವಷ್ಟೇ ಸಾವಿಗೆ ನಿಖರವಾದ ಕಾರಣ ತಿಳಿದುಬರಬೇಕಿದೆ.
ಬಿಜೆಪಿ ಕಾರ್ಯಕರ್ತನಾಗಿದ್ದ ಜ್ಯೋತಿಷ್ ಬಂಗ್ರಗುಡ್ಡೆಯ ಸಿನಾನ್, ಸೂರ್ಲು ವಿನ ರಿಷಾದ್ ಕೊಲೆ ಪ್ರಕರಣದ ಆರೋಪಿಯಾಗಿದ್ದನ್ನಲ್ಲದೆ, ತಳಂಗರೆಯ ಜೈನುಲ್ ಆಬಿದ್ ಕೊಲೆ ಪ್ರಕರಣದಲ್ಲೂ ಈತ ಶಾಮೀಲಾಗಿರುವ ಆರೋಪ ಎದುರಿಸುತ್ತಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
