- Advertisement -
- Advertisement -
ಕಾಸರಗೋಡು: ಇಲ್ಲಿನ ಮುಂಡಿತ್ತಡ್ಕ-ಪಳ್ಳಂ ರಸ್ತೆಯ ಬೋಳ್ಕನಡ್ಕ ಎಂಬಲ್ಲಿ ಕೆಂಪು ಕಲ್ಲು ಸಾಗಾಟದ ಮಿನಿಲಾರಿ ಪಲ್ಟಿಯಾಗಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಮೃತ ವ್ಯಕ್ತಿ ಜಾರ್ಖಂಡ್ ಮೂಲದ ಸುಧೀರ್(30) ಎನ್ನಲಾಗಿದೆ.
ಘಟನೆಯಲ್ಲಿ ಚಾಲಕ ಸೇರಿದಂತೆ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಡಿಕ್ಕಿ ಹೊಡೆದು ಬಳಿಕ ಹೊಂಡಕ್ಕೆ ಮಗುಚಿ ಬಿದ್ದಿದೆ. ಈ ಘಟನೆ ಬಗ್ಗೆ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -