ಹಿಂದೂಗಳ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ ದ್ವಾರಕಾದಲ್ಲಿ ಸುನ್ನಿ ವಕ್ಫ್ ಬೋರ್ಡ್ ತನ್ನ ನರಿ ಬುದ್ಧಿಯನ್ನು ತೋರಿಸಿದೆ. ದ್ವಾರಕಾದಲ್ಲಿರುವ 2 ದ್ವೀಪಗಳ ಮೇಲೆ ಹಕ್ಕು ಸಾಧಿಸಲು ಸುನ್ನಿ ವಕ್ಫ್ ಬೋರ್ಡ್ ಮುಂದಾಗಿದೆ. ಈ ಹಿನ್ನಲೆ ತಮಗೆ ಎರಡು ದ್ವೀಪದಲ್ಲಿ ಹಕ್ಕು ಇದೆ ಎಂದು ಗುಜರಾತ್ನ ಉಚ್ಛ ನ್ಯಾಯಾಲಕ್ಕೆ ಅರ್ಜಿ ಹಾಕಿದ್ದ ಸುನ್ನಿ ವಕ್ಫ್ ಬೋರ್ಡ್ ತೀವ್ರ ಮುಖಭಂಗವನ್ನು ಅನುಭವಿಸಿದೆ.
ಹಿಂದೂಗಳ ಪವಿತ್ರ ತೀರ್ಥ ಸ್ಥಳವಾಗಿರುವ ದ್ವಾರಕಾದಲ್ಲಿನ 2 ದ್ವೀಪಗಳ ಮೇಲೆ ಹಕ್ಕು ಸಾಧಿಸಲು ಹೋದ ಸುನ್ನಿ ವಕ್ಫ್ ಬೋರ್ಡ್ ನ ನಡೆಯನ್ನು ಹಿಂದೂ ಸಂಘಟನೆಗಳು ತೀವ್ರವಾಗಿ ವಿರೋಧಿಸಿತ್ತು. ದ್ವಾರಕಾ ದ್ವೀಪ ಸಮೂಹದಲ್ಲಿ ಒಟ್ಟು 8 ಚಿಕ್ಕ ದ್ವೀಪಗಳಿವೆ. ಈ ದ್ವೀಪ ಸಮೂಹವನ್ನು ತಲುಪಲು ಓಖಾದಿಂದ ನೌಕೆಯ ಮೂಲಕ ಹೋಗಲು 30ನಿಮಿಷ ತಗಲುತ್ತದೆ. ಈ ದ್ವೀಪ ಸಮೂಹದಲ್ಲಿ 8000 ಕುಟುಂಬಗಳು ವಾಸಿಸುತ್ತವೆ. ಅವುಗಳಲ್ಲಿನ 6000 ಮುಸಲ್ಮಾನ ಕುಟುಂಬಗಳಾಗಿವೆ.
ತನ್ನ ಈ ಅರ್ಜಿಯಲ್ಲಿ ಸುನ್ನಿ ವಕ್ಫ್ ಬೋರ್ಡ್ ‘ದ್ವಾರಕಾ ದ್ವೀಪಸಮೂಹದ ಎರಡು ದ್ವೀಪಗಳ ಮೇಲೆ ನಮ್ಮ ಅಧಿಕಾರವಿದೆ’ ಎಂದು ಹೇಳಿದೆ. ಇದಕ್ಕೆ ನ್ಯಾಯಾಲಯವು ನೀವು ಏನು ಹೇಳುತ್ತಿದ್ದೀರಿ ಎಂಬುದರ ಅರಿವಾದರೂ ನಿಮಗಿದೆಯೇ? ಶ್ರೀ ಕೃಷ್ಣನ ನಗರಿಯಾಗಿರುವ ಭೂಮಿಯ ಮೇಲೆ ವಕ್ಫ್ ಬೋರ್ಡ್ ತನ್ನ ಅಧಿಕಾರವಿದೆ ಎಂದು ಹೇಗೆ ಹೇಳಬಹುದು?’ ಎಂದು ಪ್ರಶ್ನಿಸಿ ಅರ್ಜಿಯನ್ನು ತಿರಸ್ಕರಿಸಿದೆ.