- Advertisement -
- Advertisement -
ಮೈಸೂರು: ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನರಾಗಿ ಒಂದು ತಿಂಗಳು ಮಾಸುವ ಮುನ್ನವೇ ಧ್ರುವನಾರಾಯಣ ಪತ್ನಿ ವೀಣಾ ವಿಧಿವಶರಾಗಿದ್ದಾರೆ.
ವೀಣಾ ಧ್ರುವನಾರಾಯಣ ಅವರಿಗೆ 55 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಕಳೆದ ಎರಡು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಿಸದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ವೀಣಾ ಮೃತಪಟ್ಟಿದ್ದಾರೆ.
ಕಳೆದ ಮಾರ್ಚ್ 11ರಂದು ಆರ್. ಧ್ರುವನಾರಾಯಣ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಧ್ರುವನಾರಾಯಣ್ ನಿಧನದ ನಂತರ ವೀಣಾ ಅವರ ಆರೋಗ್ಯದ ಸ್ಥಿತಿ ಮತ್ತಷ್ಟು ಗಂಭೀರವಾಗಿತ್ತು.
ಧ್ರುವನಾರಾಯಣ್ಗೆ ದರ್ಶನ್ ಮತ್ತು ಧೀರನ್ ಇಬ್ಬರು ಪುತ್ರರಿದ್ದಾರೆ. ಕೇವಲ 20 ದಿನಗಳ ಅಂತರದಲ್ಲೇ ಪತಿ, ಪತ್ನಿ ನಿಧನದಿಂದ ಧ್ರುವನಾರಾಯಣ್ ಮಕ್ಕಳು ಕಂಗಾಲಾಗಿದ್ದಾರೆ.
- Advertisement -