- Advertisement -
- Advertisement -
ನೆಲಮಂಗಲ: ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಸೋಮೇಗೌಡ(25), ಜಯಕುಮಾರ್(32), ಭವಾನಿ(25) ಬಂಧಿತ ಆರೋಪಿಗಳು.
ಕೆಲಸ ಕೊಡಿಸುವುದಾಗಿ ಸುಳ್ಳು ಹೇಳಿ ಬೆಂಗಳೂರಿನ ಕೆ.ಆರ್.ಪುರಂ ನಿಂದ 24ವರ್ಷದ ಯುವತಿಯನ್ನ ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಸದ್ಯ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಿಸಿದ್ದಾರೆ.
ಬಾಡಿಗೆ ಮನೆ ಪಡೆದು ಫೋನ್ ಕಾಲ್ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ದಂಧೆ ನಡೆಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಬಳಿಕ ಪೊಲೀಸ್ ಇನ್ಸ್ಪೆಕ್ಟರ್ ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
- Advertisement -