Saturday, June 28, 2025
spot_imgspot_img
spot_imgspot_img

ಕೈಕಂಬ: ಜೇನುತುಪ್ಪ ಎಂದು ಬೆಲ್ಲಪಾಕ ಮಾರಿದವರಿಗೆ ಬಿತ್ತು ಧರ್ಮದೇಟು.!

- Advertisement -
- Advertisement -

ಬಂಟ್ವಾಳ: ಬಿ.ಸಿ.ರೋಡ್‌ ಸಮೀಪದ ಕೈಕಂಬದಲ್ಲಿ ಗುರುವಾರ ಬೆಳಗ್ಗೆ ಕಟ್ಟಡದ ಮೇಲೆ ಕಟ್ಟಿದ್ದ ಜೇನುಗೂಡಿಂದ ಜೇನು ತೆಗೆದು ಕೊಡುತ್ತೇವೆ ಎಂದು ಜನರನ್ನು ವಂಚಿಸಿ ಬೆಲ್ಲದ ಪಾಕ ಮಾರಾಟ ಮಾಡುತ್ತಿದ್ದ ನಕಲಿ ಜೇನು ಮಾರಾಟಗಾರರ ತಂಡಕ್ಕೆ ಜನರು ಧರ್ಮದೇಟು ನೀಡಿ ಓಡಿಸಿದ ಘಟನೆ ನಡೆದಿದೆ.

ಕೈಕಂಬ ಜಂಕ್ಷನ್‌ನಲ್ಲಿರುವ ಕಟ್ಟಡದ ಮೇಲಂತಸ್ತಿನಲ್ಲಿ ಜೇನು ಗೂಡು ಕಟ್ಟಿತ್ತು. ಜೇನು ಗೂಡನ್ನು ತೆರವುಗೊಳಿಸಿಕೊಡುವುದಾಗಿ ಅನ್ಯರಾಜ್ಯದ ಕಾರ್ಮಿಕರ ತಂಡ ಆಗಮಿಸಿತ್ತು. ಇತ್ತೀಚೆಗಷ್ಟೆ ಗೂಡು ಕಟ್ಟಿದ್ದರಿಂದ ಅದರಲ್ಲಿ ಜೇನು ಸಂಗ್ರಹಗೊಂಡಿರಲಿಲ್ಲ. ಈ ನಡುವೆ ತಂಡ ಬೆಲ್ಲಪಾಕ ಹಾಗೂ ಜೇನು ಮೇಣವನ್ನು ಮೊದ ಸಿದ್ಧಪಡಿಸಿಟ್ಟುಕೊಂಡು ಈಗಷ್ಟೇ ತೆಗೆದ ಜೇನು ತುಪ್ಪ ಎಂದು ಜನರನ್ನು ನಂಬಿಸಿ ಮಾರಾಟ ಮಾಡಿ ಹಣ ಸಂಪಾದಿಸಿದ್ದರು. ಕೆಲಹೊತ್ತಿನಲ್ಲಿಯೇ ಇದು ಬೆಲ್ಲದ ಪಾಕ ಎಂದು ಅರಿವಾಗಿ ಆಕ್ರೋಶಿತ ಸಾರ್ವಜನಿಕರು ಕಾರ್ಮಿಕರನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ಇನ್ನು ಎಲ್ಲೂ ನಕಲಿ ಜೇನುತುಪ್ಪ ಮಾರಾಟಮಾಡದಂತೆ ಎಚ್ಚರಿಕೆ ನೀಡಿ ಓಡಿಸಿದ್ದಾರೆಂದು ತಿಳಿದುಬಂದಿದೆ.

- Advertisement -

Related news

error: Content is protected !!