Saturday, June 28, 2025
spot_imgspot_img
spot_imgspot_img

ಕೋಮು ಸಂಘರ್ಷ ಕದಡಲು ಯತ್ನ; ಇಬ್ಬರು ಸಂಘ ಪರಿವಾರದ ಕಾರ್ಯಕರ್ತರ ಬಂಧನ

- Advertisement -
- Advertisement -
vtv vitla

ಭಟ್ಕಳ: ಕೋಮು ಸಂಘರ್ಷ ಹುಟ್ಟಿಸಿ ಶಾಂತಿ ಕದಡಲು ಪ್ರಯತ್ನಿಸಿದ ಇಬ್ಬರು ಸಂಘಪರಿವಾರದ ಕಾರ್ಯಕರ್ತರನ್ನು ಭಟ್ಕಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿರಾಲಿಯ ನವೀನ್ ಸೋಮಯ್ಯ ನಾಯ್ಕ, ನವೀನ್ ವೆಂಕಟೇಶ ನಾಯ್ಕ ಬಂಧಿತರು.ಇವರು ಸಂಘಪರಿವಾರದ ಕಾರ್ಯಕರ್ತರು ಎಂದು ತಿಳಿದು ಬಂದಿದೆ.

ಸೋಮಯ್ಯ ಮತ್ತು ವೆಂಕಟೇಶ ಎಂಬವರು ಭಟ್ಕಳದಲ್ಲಿ ಕೋಮು ಸೌಹಾರ್ದತೆ ಕದಡಲು ಮತ್ತು ಶಾಂತಿ ಭಂಗ ಮಾಡಲು ಇಬ್ಬರೂ ವೈಯಕ್ತಿಕ ಕಾರಣಕ್ಕೆ ಒಬ್ಬರಿಗೊಬ್ಬರು ಜಗಳ ಮಾಡಿಕೊಂಡು ನವೀನ್, ಸೋಮಯ್ಯನಿಗೆ ಕೀ ಚೈನ್ನಿಂದ ತಲೆಗೆ ಹಲ್ಲೆ ನಡೆಸಿದ್ದಾನೆ. ಬಳಿಕ ಹಲ್ಲೆಯನ್ನು ಅನ್ಯ ಕೋಮಿನವರು ಮಾಡಿದ್ದಾರೆ ಎಂದು ಆರೋಪಿಸಿ ನವೀನ್ ಸೋಮಯ್ಯ ಮುರುಡೇಶ್ವರ ಠಾಣೆಗೆ ಸುಳ್ಳು ದೂರು ನೀಡಿದ್ದಾನೆ. ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಆರಂಭಿಸಿ ಸತ್ಯಾಸತ್ಯತೆಯನ್ನು ಬಯಲಿಗೆಳೆದಿದ್ದಾರೆ. ಭಟ್ಕಳ ಠಾಣೆಯ ಸಿಪಿಐ ಮಹಾಬಲೇಶ್ವರ ನಾಯಕ ತಂಡವು ಇಬ್ಬರನ್ನು ತೀವ್ರ ವಿಚಾರಣೆ ನಡೆಸಿದಾಗ ಭಟ್ಕಳದಲ್ಲಿ ಕೋಮು ಸಂಘರ್ಷ ಮೂಡಿಸಿ ಶಾಂತಿ ಕದಡಲು ಪ್ರಯತ್ನಿಸಿರುವುದಾಗಿ ಒಪ್ಪಿಕೊಂಡಿದ್ದಾರೆ.

- Advertisement -

Related news

error: Content is protected !!