- Advertisement -
- Advertisement -


ಕಾಸರಗೋಡು: ಗುಂಡೇಟು ತಗುಲಿ ಸಿಪಿಐ ಮುಖಂಡರೋರ್ವರು ಮೃತಪಟ್ಟ ದಾರುಣ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಪೊಯಿನಾಚಿ ಕರಿಚ್ಚೇರಿಯಲ್ಲಿ ನಡೆದಿದೆ.
ಕರಿಚ್ಚೇರಿ ಯ ಮಾಧವನ್ (65) ಮೃತಪಟ್ಟವರು. ಹಲಸು ಕೊಯ್ಯಲು ಹಿತ್ತಿಲಿಗೆ ತೆರಳಿದ್ದ ಮಾಧವನ್ ರವರು ನೆಲದಲ್ಲಿಟ್ಟಿದ್ದ ಕೋವಿಯನ್ನು ಮೆಟ್ಟಿದಾಗ ಗುಂಡು ಕಾಲಿಗೆ ತಗಲಿದೆ.

ಕಾಡುಹಂದಿಗೆ ಗುರಿ ಇಟ್ಟು ಈ ಕೋವಿಯನ್ನು ಪರಿಸರವಾಸಿಯೊಬ್ಬರು ಹಿತ್ತಿಲಿನಲ್ಲಿ ತಂದಿಟ್ಟಿದ್ದರು ಎನ್ನಲಾಗಿದೆ. ಘಟನೆ ನಡೆದ ಗಂಟೆಗಳ ಬಳಿಕ ಇದು ಮನೆಯವರ ಗಮನಕ್ಕೆ ಬಂದಿದೆ . ಕೂಡಲೇ ಕಾಸರಗೋಡು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ . ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- ಪಾರ್ಟ್ಟೈಮ್ ಕೆಲಸದ ಆಮಿಷ: ಹಣ ಪಡೆದು ವಂಚನೆ; ಪ್ರಕರಣ ದಾಖಲು
- ಒಂದೇ ಕ್ಷಣದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬ; ಕೆರೆಗೆ ಬಿದ್ದು ಅವಳಿ ಮಕ್ಕಳ ಸಾವು
- ದಾಖಲೆ ಇಲ್ಲದೇ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್: ಎಂಆರ್ಪಿಎಲ್ ಉದ್ಯೋಗಿ ಸೇರಿ ಇಬ್ಬರ ವಿರುದ್ಧ ಎಫ್ಐಆರ್, ಇಬ್ಬರು ಕಾನ್ಸ್ಟೇಬಲ್ ಅಮಾನತು
- ಸಂಚರಿಸುತ್ತಿದ್ದ ಲಾರಿ ಬೆಂಕಿಗಾಹುತಿ-ಡೀಸೆಲ್ ಸೋರಿಕೆಯಿಂದ ಅನಾಹುತ-ಶಿರಾಡಿ ಘಾಟ್ ನಲ್ಲಿ ನಡೆದ ಘಟನೆ
- ಮಂಗಳೂರಿನಲ್ಲಿ ನಡೆಯುವ ಕ್ಯಾಬೆನೆಟ್ ಸಭೆಗೆ ಮುನ್ನ ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಸಿದ್ಧಪಡಿಸಿ: ಮುಖ್ಯಮಂತ್ರಿ ಡಿಕೆಶಿ ಸೂಚನೆ



- Advertisement -








