Sunday, June 29, 2025
spot_imgspot_img
spot_imgspot_img

ಗ್ಯಾರೇಜ್‌ನಲ್ಲಿ ಧಿಡೀರ್ ಬೆಂಕಿ ; 10 ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಬೆಂಕಿಗಾಹುತಿ

- Advertisement -
- Advertisement -
vtv vitla

ಬೆಂಗಳೂರು : ಇಲ್ಲಿನ ರಾಮಮೂರ್ತಿ ನಗರದ ಕಸ್ತೂರಿ ನಗರದಲ್ಲಿ ಕಾರು ಗ್ಯಾರೇಜ್ ನಲ್ಲಿ ಧಿಡೀರ್ ಬೆಂಕಿ ಅನಾಹುತ ಸಂಭವಿಸಿ 10 ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ಚಾಂದ್ ಪಾಷ, ತಬೇರೇಸ್ ಪಾಷ ಎಂಬವರಿಗೆ ಸೇರಿದ ಗ್ಯಾರೇಜ್ ನಲ್ಲಿ ನಿನ್ನೆ ರಾತ್ರಿ 8 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಅವಘಡದಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ 10 ಕ್ಕೂ ಅಧಿಕ ಐಷಾರಾಮಿ ಕಾರುಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!