Tuesday, September 1, 2026
spot_imgspot_img
spot_imgspot_img

ಜಲಪಾತದಲ್ಲಿ ಈಜಲು ಹೋದ ಯುವಕ ನೀರು ಪಾಲು

- Advertisement -
- Advertisement -
driving

ಜಲಪಾತದಲ್ಲಿ ಈಜಲು ಹೋದ ಯುವಕನೋರ್ವನ ಮುಖ ಹಾಗೂ ತಲೆಗೆ ತೀವ್ರ ಪೆಟ್ಟು ಬಿದ್ದು ಮೃತಪಟ್ಟಿರುವ ಘಟನೆ ಸಕಲೇಶಪುರ ತಾಲೂಕಿನ ಮೂಕನ ಮನೆ ಜಲಪಾತದಲ್ಲಿ ನಡೆದಿದೆ.

ಬೆಂಗಳೂರು ಮೂಲದ ಕೆ.ಎನ್.ನಿಂಗರಾಜ್ (17) ಮೃತ ದುರ್ದೈವಿಯಾಗಿದ್ದು ಬೆಂಗಳೂರಿನ ರಾಜಾಜಿನಗರದ ಪ್ಯಾರಾ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಯೆಂದು ತಿಳಿದು ಬಂದಿದೆ.

ನಿಂಗರಾಜ್ ವಳಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಸರಾಂತ ಮೂಕನಮನೆ ಜಲಪಾತಕ್ಕೆ ತನ್ನ ಕಾಲೇಜಿನ ಸಹಪಾಠಿಗಳು ಹಾಗೂ ಕಾಲೇಜಿನ ಕೆಲವು ಸಿಬ್ಬಂದಿಗಳ ಜೊತೆಗೆ ಪ್ರವಾಸಕ್ಕೆ ಬಂದಿದ್ದು ತನ್ನ ಕೆಲವು ಸಹಪಾಠಿಗಳ ಜೊತೆಗೆ ಈತ ಜಲಪಾತದಲ್ಲಿ ಈಜಲು ಇಳಿದಿದ್ದಾನೆ. ಈ ವೇಳೆ ನೀರಿನ ಸುಳಿಗೆ ಸಿಕ್ಕಿ ಕೊಚ್ಚಿ ಹೋಗಿ ಬಂಡೆಯೊಂದಕ್ಕೆ ಮುಖ ಹಾಗೂ ತಲೆ ಅಪ್ಪಳಿಸಿದ ಪರಿಣಾಮ ತೀವ್ರ ಪೆಟ್ಟು ಬಿದ್ದಿದೆ. ಇವನನ್ನು ರಕ್ಷಿಸಲು ಸಮೀಪದಲ್ಲಿದವರು ತೀವ್ರ ಪ್ರಯತ್ನಿಸಿದರೂ ಸಹ ನೀರಿನ ವೇಗ ಹೆಚ್ಚಿದ್ದರಿಂದ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ. ನಂತರ ಪೊಲಿಸರು,ಅಗ್ನಿ ಶಾಮಕ ದಳದ ಸಿಬ್ಬಂದಿ ಸಹಾಯದಿಂದ ಮೃತ ದೇಹವನ್ನು ನೀರಿನಿಂದ ಹೊರ ತೆಗೆಯಲಾಯಿತು.

ಅನಿರೀಕ್ಷಿತವಾಗಿ ನಡೆದ ಈ ಘಟನೆಯಿಂದ ಜೊತೆಯಲ್ಲಿ ಬಂದವರು ಅಘಾತಕ್ಕಿಡಾಗಿದ್ದು ಇವರ ಆಕ್ರಂಧನ ಮುಗಿಲು ಮುಟ್ಟಿತ್ತು. ನಂತರ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಗೆ ಶವ ಪರೀಕ್ಷೆಗೆ ಕಳುಹಿಸಲಾಯಿತು. ಸ್ಥಳಕ್ಕೆ ಯಸಳೂರು ಪಿಎಸ್ಐ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!