Sunday, June 29, 2025
spot_imgspot_img
spot_imgspot_img

ಡಿ.ಕೆ.ಶಿವಕುಮಾರ್​ ಒಡೆತನದ ಶಾಲೆಗೆ ಬಾಂಬ್​ ಬೆದರಿಕೆ..! ಆತಂಕದಲ್ಲಿ ಪೋಷಕರು, ಸಾವಿರಾರು ಮಕ್ಕಳ ಸ್ಥಳಾಂತರ

- Advertisement -
- Advertisement -

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಒಡೆತನದ ಶಾಲೆಗೆ ಬಾಂಬ್​ ಇಡೋದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದು, ಪೊಲೀಸರು, ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್​ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಶಾಲೆಯಲ್ಲಿ ಸಾವಿರಾರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಅವರನ್ನೆಲ್ಲಾ ಬೇರೆಡೆಗೆ ಸ್ಥಳಾಂತರ ಮಾಡುವ ಕಾರ್ಯ ನಡೆಯುತ್ತಿದೆ.

ಆರ್​ಆರ್ ನಗರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಡಿಕೆಶಿ ಮಾಲೀಕತ್ವದ ನ್ಯಾಶನಲ್ ಹಿಲ್​ ವ್ಯೂ ಪಬ್ಲಿಕ್ ಸ್ಕೂಲ್ ಇದೆ. ಈ ಶಾಲೆಗೆ ಬಾಂಬ್​ ಹಾಕುವುದಾಗಿ ಭಾನುವಾರ ಸಂಜೆ ದುಷ್ಕರ್ಮಿಗಳು ಯೂನಿಟ್​-3ಗೆ ಮೇಲ್​ ಮಾಡಿದ್ದಾರೆ. ಸೋಮವಾರ ಬೆಳಗ್ಗೆ ಸಿಬ್ಬಂದಿ ಶಾಲೆಗೆ ಬಂದಾಗ ಮೇಲ್​ ನೋಡಿ ಗಾಬರಿಯಾಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಆರ್​ಆರ್​ ನಗರ ಠಾಣೆ ಪೊಲೀಸರು ಮತ್ತು ಬಾಂಬ್​ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿದ್ದಾರೆ. ಈಗಾಗಲೇ ಶಾಲೆಯ ಯೂನಿಟ್ 1ರಿಂದ ಯೂನಿಟ್ 2ಗೆ ಒಂದೂವರೆ ಸಾವಿರ ಮಕ್ಕಳನ್ನು ಸಿಬ್ಬಂದಿ ಶಿಫ್ಟ್ ಮಾಡಿದ್ದಾರೆ.

ಶಾಲೆಗೆ ಆಗಮಿಸಿದ ಡಿಕೆಶಿ ಪುತ್ರಿ ಐಶ್ವರ್ಯಾ ಶಿವಕುಮಾರ್, ಸಿಬ್ಬಂದಿ ಮತ್ತು ಪೊಲೀಸರ ಬಳಿ ಮಾಹಿತಿ ಪಡೆಯುತ್ತಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಭಯದಲ್ಲೇ ಪೋಷಕರು ಶಾಲೆ ಮುಂದೆ ಜಮಾಯಿಸಿದ್ದು, ಮಕ್ಕಳನ್ನ ನೋಡಬೇಕು ಅನ್ನುತ್ತಿದ್ದಾರೆ.

- Advertisement -

Related news

error: Content is protected !!