- Advertisement -
- Advertisement -
ಚಿಕ್ಕಮಗಳೂರು: ಡಿಗ್ರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಸ್ಪಂದನ (18) ಎನ್ನಲಾಗಿದೆ.
ಎನ್. ಆರ್.ಪುರ ಡಿಗ್ರಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು. ಮೂರು ತಿಂಗಳ ಹಿಂದೆ ಈಕೆಯ ತಂದೆ ಮೃತಪಟ್ಟಿದ್ದರು. ಇದರಿಂದ ವಿದ್ಯಾರ್ಥಿನಿ ಆಘಾತಕ್ಕೆ ಒಳಗಾಗಿದ್ದಳು ಎನ್ನಲಾಗಿದೆ. ನಿನ್ನೆ ಭದ್ರ ಹಿನ್ನೀರಿಗೆ ಹಾರಿ ಸ್ಪಂದನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ನೈಜ ಕಾರಣ ಇನ್ನೂ ನಿಗೂಢವಾಗಿದೆ ಎನ್ನಲಾಗಿದೆ.
- Advertisement -