Sunday, June 29, 2025
spot_imgspot_img
spot_imgspot_img

ನಕಲಿ ಸಂಖ್ಯೆಯಿಂದ ಕರೆ ಮಾಡಿ ಜನಪ್ರತಿನಿಧಿಗಳಿಗೆ ನಿಂದನೆ; ಆರೋಪಿ ಬಂಧನ

- Advertisement -
- Advertisement -

ಕಾಸರಗೋಡು: ನಕಲಿ ಸಂಖ್ಯೆಯಿಂದ ಕರೆ ಮಾಡಿ ಹಿರಿಯ ಪೊಲೀಸ್ ಅಧಿಕಾರಿ, ಜಿಲ್ಲಾಧಿಕಾರಿ ಹಾಗೂ ರಾಜಕೀಯ ಪಕ್ಷಗಳ ಮುಖಂಡರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ತ್ರಿಶ್ಯೂರ್ ಮರತ್ತನ್ ಕೋಡ್‌ನ ಕೆ.ಎಂ. ಹಬೀಬ್ ರಹಮಾನ್ ( 29) ಬಂಧಿತ. ಸಾಮಾಜಿಕ ಜಾಲಗಳಲ್ಲಿ ಮರ್ಲಿ ಎಂದು ಹೆಸರನ್ನಿಟ್ಟುಕೊಂಡಿದ್ದ ಈತ ನಕಲಿ ಸಂಖ್ಯೆಗಳನ್ನು ಬಳಸಿ ವಾಟ್ಸಾಪ್ ಗ್ರೂಪ್‌ಗಳನ್ನು ರಚಿಸಿದ್ದ. ಅಲ್ಲದೆ ಅನೇಕ ವಿದ್ಯಾರ್ಥಿಗಳನ್ನು, ಯುವಕರನ್ನು ಸದಸ್ಯರನ್ನಾಗಿ ಮಾಡಿಕೊಂಡಿದ್ದ.

astr

ವಿದೇಶದಲ್ಲಿದ್ದುಕೊಂಡು ಅಧಿಕಾರಿಗಳು, ರಾಜಕೀಯ ಪಕ್ಷದ ಮುಖಂಡರು ಮತ್ತು ಜನಪ್ರತಿನಿಧಿಗಳ ಮೊಬೈಲ್‌ಗೆ ಕರೆ ಮಾಡಿ ನಿಂದಿಸಿ ಬೆದರಿಕೆ ಹಾಕುತ್ತಿದ್ದ. ಬಳಿಕ ಕರೆ ಮಾಡಿ ಮಾತನಾಡಿದ್ದನ್ನು ರೆಕಾರ್ಡ್ ಮಾಡಿಕೊಂಡು ವಾಟ್ಸಾಪ್ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಮಾಡುತ್ತಿದ್ದ. ಈ ಬಗ್ಗೆ ನಿಗಾ ಇರಿಸಿದ್ದ ಪೊಲೀಸರು ಮೂಲವನ್ನು ಪತ್ತೆ ಹಚ್ಚಿ ಆರೋಪಿ ವಿದೇಶದಿಂದ ಊರಿಗೆ ಆಗಮಿಸುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Related news

error: Content is protected !!