- Advertisement -
- Advertisement -
ಪುತ್ತೂರು: ಪುತ್ತೂರಿನ ಕೆ.ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯಿರುವ ಗಾಂಧಿ ಪ್ರತಿಮೆಯನ್ನು ಕಿಡಿಗೇಡಿಗಳು ವಿಕೃತಗೊಳಿಸಿರುವ ಘಟನೆ ನಡೆದಿದೆ.
ಕಿಡಿಗೇಡಿಗಳಿಂದ ಗಾಂಧಿ ಪ್ರತಿಮೆಯಲ್ಲಿರುವ ಕನ್ನಡಕ ತೆಗೆದು ಪ್ರತಿಮೆಯ ತಲೆಗೆ ಇಟ್ಟು ಹಾಗೂ ಪ್ರತಿಮೆಯ ತಲೆಗೆ ಟೀ ಶರ್ಟ್ ಇಟ್ಟು ಗಾಂಧೀಜಿಯನ್ನು ಅವಮಾನಗೊಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಪುತ್ತೂರು ಡಿವೈ ಎಸ್ ಪಿ ಡಾ. ಗಾನ ಪಿ ಕುಮಾರ್ ಮತ್ತು ಸರ್ಕಲ್ ಇನ್ಸೆಕ್ಟರ್ ಗೋಪಾಲ್ ನಾಯ್ಕ ಕಿಡಿಗೇಡಿಗಳ ಪತ್ತೆಯ ಕಾರ್ಯಾಚರಣೆ ನಡೆಸುತ್ತಿದ್ದಾರೆ.
- Advertisement -