Sunday, June 29, 2025
spot_imgspot_img
spot_imgspot_img

ಪುತ್ತೂರು: ಅಕ್ರಮ ಗೋ ಸಾಗಾಟ; ಆರೋಪಿಯನ್ನು ಪೊಲೀಸರಿಗೊಪ್ಪಿಸಿದ ಹಿಂ.ಜಾ.ವೇ ಕಾರ್ಯಕರ್ತರು

- Advertisement -
- Advertisement -

ಪುತ್ತೂರು: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಹಿಡಿದು ಹಿಂ.ಜಾ.ವೇ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಆರ್ಲಪದವು ಸಮೀಪ ನಡೆದಿದೆ.

ಹಿಂದೂ ಜಾಗರಣ ವೇದಿಕೆ ಆರ್ಲಪದವು ಹಾಗು ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಜಂಟಿ ಕಾರ್ಯಚರಣೆಯಲ್ಲಿ ಆರ್ಲಪದವು ಸಮೀಪದ ಕೊಂದಲ್ಕಾನ ಎಂಬಲ್ಲಿ ಅಕ್ರಮ ಗೋಸಾಗಾಟ ಪತ್ತೆಯಾಗಿದೆ. ಆರೋಪಿ ಪೆರ್ಲದ ಸ್ವರ್ಗ ಎಂಬಲ್ಲಿನ ಜಗನ್ನಾಥ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈತ ಹಲವಾರು ವರ್ಷಗಳಿಂದ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ. ಸಂಪ್ಯ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!