![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
![](https://vtvvitla.com/wp-content/uploads/2022/01/Lakshmi-Ganesh-2-1024x683.jpg)
![](https://vtvvitla.com/wp-content/uploads/2022/12/STICH-POINT-2-1024x510.jpg)
![](https://vtvvitla.com/wp-content/uploads/2022/01/indane-gas-2-1024x748.jpg)
![](https://vtvvitla.com/wp-content/uploads/2022/11/mahamanthrika-699x1024.jpg)
ಪುತ್ತೂರು: ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ಶಾಖೆಯ ಚುನಾವಣೆ ನಡೆದು ಫಲಿತಾಂಶ ಹೊರಬಿದ್ದಿದೆ. 15 ಹುದ್ದೆಗಳಿಗೆ 20 ಮಂದಿ ನಾಮಪತ್ರ ಸಲ್ಲಿಸಿದ್ದರು. ಎ.ಸಿದ್ದಿಕ್ ನೀರಾಜೆ ಅವರು ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಒಂದು ಹುದ್ದೆಗೆ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಎರಡು ಹುದ್ದೆಗಳಿಗೆ ಎರಡು ನಾಮಪತ್ರ, ಪ್ರಧಾನ ಕಾರ್ಯದರ್ಶಿ ಒಂದು ಹುದ್ದೆಗೆ ಎರಡು ನಾಮಪತ್ರ, ಕಾರ್ಯದರ್ಶಿ ಎರಡು ಹುದ್ದೆಗೆ ಎರಡು ನಾಮಪತ್ರ, ಕೋಶಾಧಿಕಾರಿ ಒಂದು ಹುದ್ದೆಗೆ ಎರಡು ನಾಮಪತ್ರ, ಕಾರ್ಯಕಾರಿ ಸಮಿತಿ ಎಂಟು ಹುದ್ದೆಗೆ 10 ನಾಮಪತ್ರಗಳು ಸಲ್ಲಿಕೆಯಾಗಿದೆ. ನಾಮಪತ್ರ ಸಲ್ಲಿಕೆಯಾಗಿದ್ದವು.
ಉಪಾಧ್ಯಕ್ಷರಾಗಿ ಎಂ.ಎಸ್.ಭಟ್ , ಕಿರಣ್ ಪ್ರಸಾದ್ ಕೆ. ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ ರೈ ಕುತ್ಯಾಳ, ಪ್ರಧಾನ ಕೋಶಾಧಿಕಾರಿಯಾಗಿ ಸಂಶುದ್ದೀನ್ ಸಂಪ್ಯ, ಕಾರ್ಯದರ್ಶಿಯಾಗಿ ಮಹಮ್ಮದ್ ನಝೀರ್ ಮತ್ತು ಅಜಿತ್ಕುಮಾರ್. ಕೆ. ಆಯ್ಕೆಯಾಗಿದ್ದಾರೆ.
ಕಾರ್ಯಕಾರಿ ಸಮಿತಿ ಸದಸ್ಯರಾಗಿಕರುಣಾಕರ ರೈ ಸಿ.ಎಚ್, ಉಮಾಶಂಕರ್, ಕುಮಾರ್ ಕೆ.ಕಲ್ಲಾರೆ , ಮೇಘ ಪಾಲೆತ್ತಾಡಿ, .ಐ.ಬಿ.ಸಂದೀಪ್ ಕುಮಾರ್, ಶೇಷಪ್ಪ ಕಜೆಮಾರ್, ಸುಧಾಕರ.ಕೆ, ಕೃಷ್ಣಪ್ರಸಾದ್ ಆಯ್ಕೆಯಾಗಿದ್ದಾರೆ.