Sunday, June 29, 2025
spot_imgspot_img
spot_imgspot_img

ಪುತ್ತೂರು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ…!!

- Advertisement -
- Advertisement -

ಪುತ್ತೂರು: ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಚಿಕ್ಕಮುಡ್ನೂ ರು ಗ್ರಾಮದ ಗುತ್ತಿಕಲ್ಲ್ ಎಂಬಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಚಿಕ್ಕಮುಡ್ನೂರು ಗ್ರಾಮದ ಪುಳುವಾರು ನಿವಾಸಿಯ ಶಿವಪ್ಪ ಗೌಡ(45) ಎನ್ನಲಾಗಿದೆ.

ಶಿವಪ್ಪ ಗೌಡರವರು ಮಾ.17ಕ್ಕೆ ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆಯಿಂದ ಹೋಗಿದ್ದು, ನಂತರ ವಾಪಸ್ಸು ಬಾರದೆ ನಾಪತ್ತೆಯಾಗಿದ್ದರು. ಇದೀಗ ಅವರ ಮೃತದೇಹವು ನೇಣುಬಿಗಿದ ಸ್ಥಿತಿಯಲ್ಲಿ ಚಿಕ್ಕಮುಡ್ನೂರು ಗ್ರಾಮದ ಗುತ್ತಿಕಲ್ಲ್ ಎಂಬಲ್ಲಿನ ಗುಡ್ಡದಲ್ಲಿ ಪತ್ತೆಯಾಗಿದೆ.

ಶಿವಪ್ಪ ವಿಪರೀತ ಅಮಲು ಪದಾರ್ಥ ಸೇವನೆ ಮಾಡುತ್ತಿದ್ದು, ಇದರಿಂದಾಗಿ ಅವರ ಪತ್ನಿ ಮತ್ತು ಮಕ್ಕಳು ತವರು ಮನೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ವಾಸ್ತವ್ಯ ಹೊಂದಿದ್ದಾರೆನ್ನಲಾಗಿದೆ.

- Advertisement -

Related news

error: Content is protected !!