Tuesday, April 30, 2024
spot_imgspot_img
spot_imgspot_img

ಪುತ್ತೂರು: ಪ್ರೀತಿ ನಿರಾಕರಿಸಿದ್ದಕ್ಕೆ ಮಹಿಳೆಯ ಕಿಡ್ನ್ಯಾಪ್; ಇಬ್ಬರು ಖಾಕಿ ವಶಕ್ಕೆ..!

- Advertisement -G L Acharya panikkar
- Advertisement -
vtv vitla

ಪುತ್ತೂರು: ಮಹಿಳೆಯೋರ್ವರನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರು ಕೆದಂಬಾಡಿ ಗ್ರಾಮದ ಬೋಳೋಡಿ ಸಮೀಪದ ಕೊಡಂಗೋಣಿ ನಿವಾಸಿಗಳಾದ ಚಂದ್ರಶೇಖರ ಮತ್ತು ಜಗದೀಶ ಎಂದು ಗುರುತಿಸಲಾಗಿದೆ.

vtv vitla

ಘಟನೆಯ ವಿವರ:
ಆರೋಪಿಗಳ ಪೈಕಿ ಓರ್ವ ತಿಂಗಳಾಡಿ ನಿವಾಸಿ ಮಹಿಳೆಯೋರ್ವರನ್ನು ಪ್ರೀತಿ ಮಾಡುತ್ತಿದ್ದನು. ಆದರೆ ಮಹಿಳೆ ಬೇರೆ ಯುವಕನನ್ನು ಪ್ರೀತಿಸುತ್ತಿದ್ದಳು ಎಂಬ ಕಾರಣ ಈತನ ಪ್ರೀತಿಯನ್ನು ನಿರಾಕರಿಸಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆ ಮತ್ತು ಆರೋಪಿ ನಡುವೆ ವಾಗ್ವಾದ ಮತ್ತು ಮೊಬೈಲ್ ಚಕಮಕಿ ನಡೆದಿತ್ತು.

ಆ ಬಳಿಕ ಆರೋಪಿಗಳಿಬ್ಬರು ಮಾತುಕತೆ ನಡೆಸಲು ತಿಂಗಳಾಡಿಗೆ ಬರಲು ಹೇಳಿ ಬಳಿಕ ಮಹಿಳೆಯನ್ನು ಇಬ್ಬರು ಸೇರಿ ಅಪಹರಣ ಮಾಡಿ ಮನೆಯೊಂದರಲ್ಲಿ ಕೂಡಿ ಹಾಕಿದ್ದರು. ಈ ಕುರಿತು ಮಾಹಿತಿ ಬಂದ ಆಧಾರದಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಅಪಹರಣ ಮಾಡಿದ ಇಬ್ಬರನ್ನು ಬಂಧಿಸಿದ್ದಾರೆ.

ಆರೋಪಿಗಳ ವಿರುದ್ಧ ಸುಳ್ಯ ತಾಲೂಕು ಕೋಡಿಯಾಲ ನಿವಾಸಿ ಶರತ್ ಕುಮಾರ್ ದೂರು ನೀಡಿದ್ದಾರೆ. ಈ ಘಟನೆ ಬಗ್ಗೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

vtv vitla
vtv vitla
vtv vitla
vtv vitla
vtv vitla
vtv vitla
- Advertisement -

Related news

error: Content is protected !!