- Advertisement -
- Advertisement -
ಪ್ರವಾಸಕ್ಕೆಂದು ಬೆಂಗಳೂರಿನ ಬಂದಿದ್ದ 87 ವಿದ್ಯಾರ್ಥಿಗಳ ಪೈಕಿ ನಾಲ್ವರು ನೀರುಪಾಲಾಗಿದ್ದು, ಅವರಲ್ಲಿ ಇಬ್ಬರ ಶವ ಪತ್ತೆಯಾಗಿದ್ದರೆ, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಈ ದುರಂತ ಸಂಭವಿಸದೆ.
ಕುಮಟಾ ತಾಲೂಕಿನ ಬಾಡ ಗ್ರಾಮದಲ್ಲಿ ಸಮುದ್ರತೀರದಲ್ಲಿ ಈ ಅವಘಡ ನಡೆದಿದೆ. ಕುಮಟಾದ ಸಿಲ್ವರ್ ಸ್ಯಾಂಡ್ ರೆಸಾರ್ಟ್ಗೆ ಬಂದಿದ್ದ ಈ ವಿದ್ಯಾರ್ಥಿಗಳು ಇಲ್ಲಿ ಸಮುದ್ರಕ್ಕಿಳಿದು ಮೋಜು ಮಸ್ತಿ ಮಾಡುತ್ತಿದ್ದರು. ಆಗ ಬೆಂಗಳೂರು ಮೂಲದ ಅರ್ಜುನ್, ಚೈತ್ರಶ್ರೀ, ತೇಜಸ್ ಡಿ., ಕಿರಣ್ ಕುಮಾರ್ ನೀರುಪಾಲಾಗಿದ್ದು, ಆ ಪೈಕಿ ಅರ್ಜುನ್, ಚೈತ್ರಶ್ರೀ ಶವ ಪತ್ತೆಯಾಗಿದೆ. ನಾಪತ್ತೆ ಆಗಿರುವ ಇಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ.
ಸ್ಥಳಕ್ಕೆ ಕುಮಟಾ ಪೊಲೀಸರು ದೌಡಾಯಿಸಿದ್ದು, ನಾಪತ್ತೆ ಆದವರಿಗಾಗಿ ಅಗ್ನಿಶಾಮಕ ದಳ ಪೊಲೀಸರು ಹಾಗೂ ಸ್ಥಳೀಯರಿಂದ ಶೋಧ ಕಾರ್ಯ ನಡೆಯುತ್ತಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.
- ಪ್ರಜ್ವಲ್ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್ಐಟಿ ಅಲರ್ಟ್..!
- ಕಟ್ಟಡದಿಂದ ಕೆಳಗೆ ಬಿದ್ದು ಕಾರ್ಮಿಕ ಸಾವು..!
- ಉಡುಪಿ: ಹೋಟೆಲ್ನಲ್ಲಿ ಅಗ್ನಿ ಅವಘಡ..!
- ಪ್ರಜ್ವಲ್ ರೇವಣ್ಣ ವಿಮಾನ ಟಿಕೆಟ್ ರದ್ದು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ತಂಡ
- ಕಾಸರಗೋಡು : ಕೃಷಿ ಸಹಕಾರಿ ಸಂಸ್ಥೆಯ ಕಾರ್ಯದರ್ಶಿ ಕೋಟ್ಯಾಂತರ ರೂ . ಸಾಲ ತೆಗೆದು ಪರಾರಿ
- Advertisement -