- Advertisement -
- Advertisement -


ಪ್ರವಾಸಕ್ಕೆಂದು ಬೆಂಗಳೂರಿನ ಬಂದಿದ್ದ 87 ವಿದ್ಯಾರ್ಥಿಗಳ ಪೈಕಿ ನಾಲ್ವರು ನೀರುಪಾಲಾಗಿದ್ದು, ಅವರಲ್ಲಿ ಇಬ್ಬರ ಶವ ಪತ್ತೆಯಾಗಿದ್ದರೆ, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಈ ದುರಂತ ಸಂಭವಿಸದೆ.
ಕುಮಟಾ ತಾಲೂಕಿನ ಬಾಡ ಗ್ರಾಮದಲ್ಲಿ ಸಮುದ್ರತೀರದಲ್ಲಿ ಈ ಅವಘಡ ನಡೆದಿದೆ. ಕುಮಟಾದ ಸಿಲ್ವರ್ ಸ್ಯಾಂಡ್ ರೆಸಾರ್ಟ್ಗೆ ಬಂದಿದ್ದ ಈ ವಿದ್ಯಾರ್ಥಿಗಳು ಇಲ್ಲಿ ಸಮುದ್ರಕ್ಕಿಳಿದು ಮೋಜು ಮಸ್ತಿ ಮಾಡುತ್ತಿದ್ದರು. ಆಗ ಬೆಂಗಳೂರು ಮೂಲದ ಅರ್ಜುನ್, ಚೈತ್ರಶ್ರೀ, ತೇಜಸ್ ಡಿ., ಕಿರಣ್ ಕುಮಾರ್ ನೀರುಪಾಲಾಗಿದ್ದು, ಆ ಪೈಕಿ ಅರ್ಜುನ್, ಚೈತ್ರಶ್ರೀ ಶವ ಪತ್ತೆಯಾಗಿದೆ. ನಾಪತ್ತೆ ಆಗಿರುವ ಇಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ.

ಸ್ಥಳಕ್ಕೆ ಕುಮಟಾ ಪೊಲೀಸರು ದೌಡಾಯಿಸಿದ್ದು, ನಾಪತ್ತೆ ಆದವರಿಗಾಗಿ ಅಗ್ನಿಶಾಮಕ ದಳ ಪೊಲೀಸರು ಹಾಗೂ ಸ್ಥಳೀಯರಿಂದ ಶೋಧ ಕಾರ್ಯ ನಡೆಯುತ್ತಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.


- ಕೇಂದ್ರೀಯ ವಿದ್ಯಾಲಯ: 6ರಿಂದ 9ನೇ ತರಗತಿಯವರೆಗೆ ಸಂಸ್ಕೃತ ವಿಭಾಗ ಕಡ್ಡಾಯ
- ವಿಠಲ್ ಜೇಸೀಸ್ ಶಾಲೆಯಲ್ಲಿ POCSO ಕಾಯ್ದೆ ಜಾಗೃತಿ ಕಾರ್ಯಾಗಾರ
- ಪತ್ನಿ ಮನೆ ಬಿಟ್ಟು ಹೋದ ದ್ವೇಷಕ್ಕೆ ಯುವಕನ ಬರ್ಬರ ಹತ್ಯೆ- ಜೋಕಟ್ಟೆ ಕೊಲೆ ಪ್ರಕರಣದಲ್ಲಿ ಇಬ್ಬರ ಬಂಧನ
- ಮಾನ್ಯತೆ ರದ್ದಾದ ಕೋಡ್ನಲ್ಲಿ ದಾಖಲಾತಿ ಇಲ್ಲ – ರದ್ದತಿಗೆ ನಾವೇ ಅರ್ಜಿ ಸಲ್ಲಿಸಿದ್ದೆವು: ಎಕ್ಸೆಲ್ ಕಾಲೇಜು ಸ್ಪಷ್ಟನೆ
- ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನ ಬ್ರೈನ್ ಮ್ಯಾಪಿಂಗ್ಗೆ ಒತ್ತಾಯ; ಎಸ್ಐಟಿಗೆ ಗಿರೀಶ್ ಮಟ್ಟಣ್ಣವರ್ ದೂರು

- Advertisement -








