- Advertisement -
- Advertisement -
ಬಂಟ್ವಾಳ: ಕಾರ್ಮಿಕರು ಉಳಿದುಕೊಂಡ ಶೆಡ್ ಗೆ ಗುಡ್ಡ ಕುಸಿದು ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಹೆನ್ರಿ ಕಾರ್ಲೊ ಎಂಬವರ ಮನೆಯ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಕನ್ನಡ ಮೂಲದ ಐವರ ಪೈಕಿ ನಾಲ್ವರು ಗುಡ್ಡ ಜರಿದು ಶೆಡ್ ನೊಳಗೆ ಸಿಲುಕಿಕೊಂಡಿದ್ದರು, ಅದರಲ್ಲಿ ಮೂವರನ್ನು ಜೆಸಿಬಿ ಮೂಲಕ ರಕ್ಷಣೆ ಮಾಡಿದರೆ ಓರ್ವ ಮೃತಪಟ್ಟಿದ್ದ. ಉಳಿದಂತೆ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ರಾತ್ರಿ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪಾಲಕ್ಕಾಡು ನಿವಾಸಿ ಬಿಜು (46), ಕೊಟ್ಟಾಯಂ ನಿವಾಸಿ ಬಾಬು (46) ಸಂತೋಷ್ ಆಲಪ್ಪುರ ಮೃತಪಟ್ಟ ದುರ್ದೈವಿಗಳು. ಕಣ್ಣೂರು ನಿವಾಸಿ ಜಾನ್ (44) ಎಂಬಾತ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
- Advertisement -