- Advertisement -
- Advertisement -
ಬಂಟ್ವಾಳ: ಬಿಸಿರೋಡಿನ ಕೈಕಂಬದಲ್ಲಿ ಎಸ್ ಡಿ ಪಿ ಐ ವತಿಯಿಂದ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿ ಹಾಕಿದ್ದ ಬ್ಯಾನರನ್ನು ಕಿಡಿಗೇಡಿಗಳು ಹರಿದು ಹಾಕಿದ ಘಟನೆ ನಡೆದಿದೆ.
ನಿನ್ನೆ ರಾತ್ರಿ ಹಾಕಲಾಗಿದ್ದ ಈ ಫ್ಲೆಕ್ಸ್ ನಲ್ಲಿ, ಎಸ್ ಡಿ ಪಿ ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಅವರಿಂದ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಎಂದು ಉಲ್ಲೇಖವಾಗಿತ್ತು. ಆದರೆ ಇಂದು ಮುಂಜಾನೆ ನೋಡಿದಾಗ ಬ್ಯಾನರ್ ಹರಿದು ಹಾಕಿದ್ದಾರೆ. ಬ್ಯಾನರ್ ಹರಿದ ಕನ್ನಡ ವಿರೋಧಿಗಳನ್ನು ಶೀಘ್ರ ಪತ್ತೆ ಹಚ್ಚಿ ಬಂಧಿಸಬೇಕೆಂದು ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಆಗ್ರಹಿಸಿದೆ.
- Advertisement -