- Advertisement -
- Advertisement -
ಬೆಂಗಳೂರು: ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಫೈನಲ್ ಆಗಿದ್ದು, ಸಚಿವ ಸುನೀಲ್ ಕುಮಾರ್ ಅವರಿಗೆ ಅದೃಷ್ಟ ಖುಲಾಯಿಸಿದೆ. ಆದರೆ ಹೆಸರನ್ನು ಅಧೀಕೃತವಾಗಿ ಘೋಷಣೆ ಮಾಡುವುದೊಂದೇ ಬಾಕಿ ಇದೆ.
ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ ಆಗಸ್ಟ್ ತಿಂಗಳಿನಲ್ಲಿ ಅಂತ್ಯವಾಗಲಿದೆ. ಈ ಹಿನ್ನೆಲೆ ಖಾಸಗಿ ರೆಸಾರ್ಟ್ವೊಂದರಲ್ಲಿ ಬಿಜೆಪಿ ಚಿಂತನ ಮಂಥನ ಸಭೆ ನಡೆಸಿತ್ತು. ಇದರಲ್ಲಿ ಮುಂದೆ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಸುನೀಲ್ ಕುಮಾರ್ ಅವರನ್ನು ಆಯ್ಕೆಗೊಳಿಸುವುದಾಗಿ ತೀರ್ಮಾನಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.. ಸುನಿಲ್ ಕುಮಾರ್ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡುವುದೊಂದೇ ಬಾಕಿ ಇದೆ.
- Advertisement -