ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಮತ್ತೊಂದು ಅಕ್ರಮ ಗೋ ಸಾಗಾಟ ಪ್ರಕರಣ ಪತ್ತೆಯಾಗಿದೆ. ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಅಕ್ರಮ ಗೋ ಸಾಗಾಟ ತಡೆದು ವಾಹನ ಸಹಿತ ಪೋಲಿಸರಿಗೊಪ್ಪಿಸಿದ ಘಟನೆ ಇಂದು ಮುಂಜಾನೆ ನಡೆದಿದೆ.
ಇಂದು ಬೆಳಿಗ್ಗೆ 7 ಗಂಟೆಯ ಸಮಯದಲ್ಲಿ ಬೆಳ್ತಂಗಡಿ ತಾಲೂಕಿನ ಪಾಂಡಿಬೆಟ್ಟು ನಿಂದ ಕೊಕ್ಕಡ ಸಮೀಪದ ಮಲ್ಲಿಗೆ ಮಜಲ್ ಗೆ ವಾಹನವೊಂದರಲ್ಲಿ ಎರಡು ಗೋವುಗಳ ಸಾಗಿಸುತ್ತಿರುವ ಬಗ್ಗೆ ಹಿಂದೂ ಜಾಗರಣ ವೇದಿಕೆಯ ಕಾರ್ಯ ಕರ್ತರಿಗೆ ಮಾಹಿತಿ ಲಭಿಸಿದ್ದು ಕೂಡಲೇ ಕಾರ್ಯ ಪ್ರವೃತ್ತರಾದ ಕೊಕ್ಕಡ ಜಾಗರಣ ವೇದಿಕೆಯ ಕಾರ್ಯಕರ್ತರು ತಿಪ್ಪೆ ಮಜಲು ಎಂಬಲ್ಲಿ ವಾಹನವನ್ನು ತಡೆದಿದ್ದಾರೆ.
ನಂತರ ಧರ್ಮಸ್ಥಳ ಠಾಣೆಯ ಪೋಲಿಸರಿಗೆ ಸುದ್ದಿ ಮುಟ್ಟಿಸಿದ್ದು , ಎರಡು ಗಂಟೆಗಳ ತರುವಾಯ ಸುಮಾರು 9 ಗಂಟೆಯ ವೇಳೆಗೆ ಪೋಲಿಸರು ಸ್ಥಳಕ್ಕೆ ಆಗಮಿಸಿದ್ದಾರೆ ಎನ್ನಲಾಗಿದೆ.
ಸದ್ಯ ಎರಡು ಗೋವು ಸಹಿತ ವಾಹನವನ್ನು ಪೋಲಿಸರು ವಶಕ್ಕೆ ಪಡೆದಿದ್ದು , ಆರೋಪಿಯನ್ನೂ ಕೂಡ ವಶಕ್ಕೆ ಪಡೆಯಲಾಗಿದೆ. ವಿಕೃತ ರೀತಿಯಲ್ಲಿ ಅಕ್ರಮ ಗೋ ಸಾಗಾಟ ಪ್ರಕರಣಗಳು ನಡೆಯುತ್ತಲೇ ಇದ್ದು, ಪೋಲಿಸರು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂಜಾಗರಣ ವೇದಿಕೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ.