- Advertisement -
- Advertisement -


ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮದ ಅಬ್ಬನ್ ಕೆರೆ ಎಂಬಲ್ಲಿ ಪತ್ನಿಯೇ ಪತಿಯನ್ನು ಹತ್ಯೆಗೈದಿರುವ ಘಟನೆ ಮಂಗಳವಾರ (ಜು.5) ನಡೆದಿದೆ.
ನಾವೂರು ಗ್ರಾಮದ ಅರಣ್ಯ ಪ್ರವಾಸಿ ಮಂದಿರ ಬಳಿಯ ಅಬ್ಬನ್ ಕೆರೆ ಬಳಿ ದಂಪತಿಗಳು ವಾಸವಿದ್ದರು. ಬೇಬಿ(60) ಕೊಲೆಯಾದ ದುರ್ದೈವಿ. ಪತ್ನಿ ನೆಲ್ಲಮ್ಮ(55) ಆರೋಪಿ. ಕೊಲೆಯಾದ ಬಳಿಕ ಪತಿ ಬಳಿ ಪತ್ನಿ ಕತ್ತಿ ಹಿಡಿದು ಕುಳಿತಿದ್ದರು.

ಕೃಷಿಕ ದಂಪತಿಯಾಗಿರುವ ಇವರಿಗೆ ಮೂವರು ಮಕ್ಕಳಿದ್ದು, ಪುತ್ರಿಗೆ ವಿವಾಹವಾಗಿದ್ದು, ಓರ್ವ ಪುತ್ರ ವಿದೇಶದಲ್ಲಿ, ಮತ್ತೋರ್ವ ಪುತ್ರ ಬೇರೆಡೆ ವಾಸವಾಗಿದ್ದಾರೆ. ಮನೆಯಲ್ಲಿ ಇಬ್ಬರೇ ಇದ್ದರು ಎಂದು ತಿಳಿದುಬಂದಿದೆ.
ಪತ್ನಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಯಾವುದೋ ಕಾರಣಕ್ಕೆ ಪತಿಯನ್ನು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಪಾರ್ಟ್ಟೈಮ್ ಕೆಲಸದ ಆಮಿಷ: ಹಣ ಪಡೆದು ವಂಚನೆ; ಪ್ರಕರಣ ದಾಖಲು
- ಒಂದೇ ಕ್ಷಣದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬ; ಕೆರೆಗೆ ಬಿದ್ದು ಅವಳಿ ಮಕ್ಕಳ ಸಾವು
- ದಾಖಲೆ ಇಲ್ಲದೇ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್: ಎಂಆರ್ಪಿಎಲ್ ಉದ್ಯೋಗಿ ಸೇರಿ ಇಬ್ಬರ ವಿರುದ್ಧ ಎಫ್ಐಆರ್, ಇಬ್ಬರು ಕಾನ್ಸ್ಟೇಬಲ್ ಅಮಾನತು
- ಸಂಚರಿಸುತ್ತಿದ್ದ ಲಾರಿ ಬೆಂಕಿಗಾಹುತಿ-ಡೀಸೆಲ್ ಸೋರಿಕೆಯಿಂದ ಅನಾಹುತ-ಶಿರಾಡಿ ಘಾಟ್ ನಲ್ಲಿ ನಡೆದ ಘಟನೆ
- ಮಂಗಳೂರಿನಲ್ಲಿ ನಡೆಯುವ ಕ್ಯಾಬೆನೆಟ್ ಸಭೆಗೆ ಮುನ್ನ ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಸಿದ್ಧಪಡಿಸಿ: ಮುಖ್ಯಮಂತ್ರಿ ಡಿಕೆಶಿ ಸೂಚನೆ


- Advertisement -








