Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ದನ ತಿವಿದು ಗಾಯಗೊಂಡಿದ್ದ ಮಹಿಳೆ ಮೃತ್ಯು

- Advertisement -
- Advertisement -

ಬೆಳ್ತಂಗಡಿ: ದನಕ್ಕೆ ಮೇವು ಹಾಕಲು ಹಟ್ಟಿಗೆ ಹೋದಾಗ ದನ ತಿವಿದು ಕುತ್ತಿಗೆ ಭಾಗಕ್ಕೆ ತೀವ್ರ ಗಾಯಗೊಂಡ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಗುಂಡೂರಿ ಗ್ರಾಮದ ದರಿಕಂಡ ನಿವಾಸಿ ಸದಾನಂದ ಪೂಜಾರಿ ಅವರ ಪತ್ನಿ ಮೋಹಿನಿ ಯಾನೆ ಪ್ರೇಮ (45) ಮೃತಪಟ್ಟವರು.

ಹಟ್ಟಿಯಲ್ಲಿ ಮೇವು ಹಾಕುತ್ತಿದ್ದಾಗ ಅನಿರೀಕ್ಷಿತವಾಗಿ ದನ ತಿವಿದು ಮೋಹಿನಿ ಕುತ್ತಿಗೆಯ ಭಾಗಕ್ಕೆ ದನದ ಕೊಂಬು ತಾಗಿ ಗಂಭೀರ ತರಹದ ಗಾಯವಾಗಿತ್ತು.ಕೂಡಲೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೋಹಿನಿ ಅವರ ಪುತ್ರಿಗೆ ಕೆಲವು ದಿನಗಳ ಹಿಂದೆಯಷ್ಟೇ ಹೆರಿಗೆಯಾಗಿದ್ದು, ಮೃತರು ಪತಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.

- Advertisement -

Related news

error: Content is protected !!