- Advertisement -
- Advertisement -
ಬೆಳ್ತಂಗಡಿ: ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಬೆಳ್ತಂಗಡಿಯ ಸೋಮಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಮೃತ ವಿದ್ಯಾರ್ಥಿ ಮೂಲತಃ ಮೂಡಿಗೆರೆ ನಿವಾಸಿ, ಬೆಳ್ತಂಗಡಿಯ ಸುದೆಮುಗೇರು ಸಂಜಯನಗರ ಬಳಿ ಪಿಜಿಯಲ್ಲಿ ವಾಸ್ತವ್ಯವಿದ್ದ ಸಮರ್ಥ್ ಎಂದು ಗುರುತಿಸಲಾಗಿದೆ.
ಸಮರ್ಥ್ ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಈತ ತನ್ನ ಗೆಳೆಯನೊಂದಿಗೆ ನದಿಗೆ ಹೋಗಿದ್ದು, ಆಕಸ್ಮಿಕವಾಗಿ ನದಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದಾಗ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಘಟನೆಯ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -