Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಉಡುಪಿಯಲ್ಲಿ ಪತ್ತೆ.!

- Advertisement -
- Advertisement -

ಬೆಳ್ತಂಗಡಿ: ಮಡಂತ್ಯಾರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ್ ಎಂಬ ಬಾಲಕ ಫ.21 ರಂದು ಕಾಲೇಜಿಗೆಂದು ಹೋದವರು ಕಾಲೇಜಿಗೂ ಹೋಗದೆ, ಮರಳಿ ಮನೆಗೂ ಬಾರದೆ ನಾಪತ್ತೆಯಾಗಿದ್ದ ಹುಡುಗ ಎಂದು ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಇ0ದು ಬೆಳಗ್ಗೆ ಉಡುಪಿ ಜಿಲ್ಲೆಯಲ್ಲಿ ಕಾರಿನ ಪಕ್ಕ ಕುಳಿತು ಅಳುತ್ತಿದ್ದ, ಸಾರ್ವಜನಿಕರು ವಿಚಾರಿಸಿದಾಗ ಮನೆ ಬಿಟ್ಟು ಬಂದಿರುವ ಬಗ್ಗೆ ಮಾಹಿತಿ ನೀಡಿದ್ದು, ಅದರಂತೆ ಸ್ಥಳೀಯರು ಮನೆಯವರಿಗೆ ತಿಳಿಸಲಾಗಿದೆ ಎಂದು ತಿಳಿದುಬಂದಿದೆ.

ಳಾಲು ನಿವಾಸಿಯಾಗಿರುವ ಜೆರಾಲ್ಡ್ ಡಿಸೋಜಾ ಮತ್ತು ಪ್ರಮೀಳಾ ದಂಪತಿ ಪುತ್ರ ಪ್ರಥಮ್ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಫೆ.21 ರಂದು ಮನೆಯಿಂದ ಕಾಲೇಜಿಗೆಂದು ತೆರಳಿ, ತರಗತಿಗೂ ಹಾಜರಾಗದೆ, ಮರಳಿ ಮನೆಗೂ ಬಾರದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದರು.

- Advertisement -

Related news

error: Content is protected !!