Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ: ಹಾಡಹಗಲೇ ಮನೆಗೆ ನುಗ್ಗಿದ ಚೋರರು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು!

- Advertisement -
- Advertisement -

ಬೆಳ್ತಂಗಡಿ: ಇಲ್ಲಿನ ಇಂದಬೆಟ್ಟು ಗ್ರಾಮದ ಬಂಗಾಡಿ ದೇರಾಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರ ತಂಡವೊಂದು ಮನೆಗೆ ನುಗ್ಗಿ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸಹಿತ ನಗದು ಕಳ್ಳತನ ಮಾಡಿರುವ ಘಟನೆ ನಡೆದಿದೆ.

ಕೃಷಿ ಜೊತೆ ಅಡಿಕೆ ವ್ಯಾಪಾರ ಮಾಡಿಕೊಂಡಿದ್ದ ದೇರಾಜೆ ಮನೆಯ ನಿವಾಸಿ ಮಹಮ್ಮದ್ (43) ಎಂಬುವರ ಮನೆಯಲ್ಲಿ ಕಳ್ಳತನವಾಗಿದೆ. ಮಹಮ್ಮದ್ ಅವರು ಅ.31 ರ ಭಾನುವಾರ ಅವರ ಪತ್ನಿ ಮತ್ತು ಮೂವರು ಮಕ್ಕಳು ಸಹಿತ ನಿಶ್ಚಿತಾರ್ಥ ಕಾರ್ಯಕ್ರಮವೊಂದಕ್ಕೆ ಬಂಟ್ವಾಳ ತಾಲ್ಲೂಕಿನ ಉಳಿ ಗ್ರಾಮಕ್ಕೆ ಹೋಗಿದ್ದರು.

ಮಹಮ್ಮದ್ ಸಮೀಪದ ಅಡಿಕೆ ತೋಟಕ್ಕೆ ಹೋಗಿದ್ದರು. ನಿಶ್ಚಿತಾರ್ಥ ಮುಗಿಸಿಕೊಂಡು ಪತ್ನಿ ಸಂಜೆ ಮನೆಗೆ ಬಂದು ನೋಡಿದಾಗ ಕಳ್ಳತನ ಆಗಿರುವುದು ಗಮನಕ್ಕೆ ಬಂದಿದೆ. 5200ರೂ ನಗದು, ನೆಕ್ಲೇಸ್ ಚೈನ್, ಚಿನ್ನದ ಬಿಸ್ಕೆಟ್, ಬಳೆ, ಮಕ್ಕಳ ಅಭರಣ ಸಹಿತ ಒಟ್ಟಾರೆ ರೂ. 12,05,200 ಮೌಲ್ಯದ 40 ಪವನ್ ಚಿನ್ನಾಭರಣ ಕಳವಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!